<p><strong>ಅಮೃತಸರ</strong>: ಪಂಜಾಬ್ನಲ್ಲಿ ನಡೆಯುವ 2022ರ ವಿಧಾನಸಭೆ ಚುನಾವಣೆ ವೇಳೆ ಸಿಖ್ ಸಮುದಾಯದ ವ್ಯಕ್ತಿ ತಮ್ಮ ಪಕ್ಷದಿಂದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ತಿಳಿಸಿದ್ದಾರೆ.</p>.<p>ನಗರದಲ್ಲಿಮಾಧ್ಯಮದವರೊಂದಿಗೆ ಮಾತನಾಡಿದ ಅವರು,ʼಸಿಖ್ ಸಮುದಾಯದ ವ್ಯಕ್ತಿಯು ಪಂಜಾಬ್ನಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ.ಇದು ಸಿಖ್ ಸಮುದಾಯದ ಹಕ್ಕು. ಮುಖ್ಯಮಂತ್ರಿ ಅಭ್ಯರ್ಥಿ ಯಾರೆಂಬುದನ್ನು ನಂತರ ಚರ್ಚಿಸಲಾಗುವುದು. ಆದರೆ, ಅದು ಯಾರೇ ಆದರೂ ಸಿಖ್ ಸಮುದಾಯದವರೇ ಆಗಿರುತ್ತಾರೆʼ ಎಂದುಹೇಳಿದ್ದಾರೆ.</p>.<p>ಇದೇ ವೇಳೆನಿವೃತ್ತ ಐಪಿಎಸ್ ಅಧಿಕಾರಿ ಕುನ್ವಾರ್ ವಿಜಯ್ ಪ್ರತಾಪ್ ಸಿಂಗ್ ಅವರು ಅರವಿಂದ್ ಕೇಜ್ರಿವಾಲ್ ಅವರ ನೇತೃತ್ವದಲ್ಲಿ ಎಎಪಿಗೆ ಸೇರ್ಪಡೆಗೊಂಡರು. ಇದು ಮುಂಬರುವ ವಿಧಾನಸಭೆ ಚುನಾವಣೆಗೆ ಎಎಪಿಗೆಹೊಸ ಉತ್ಸಾಹ ನೀಡಿದೆ. ಈ ಬಗ್ಗೆ ಮಾತನಾಡಿರುವ ದೆಹಲಿ ಸಿಎಂ, ʼಕುನ್ವಾರ್ ವಿಜಯ್ ಪ್ರತಾಪ್ ಅವರು ರಾಜಕಾರಣಿಯಲ್ಲ. ಅವರನ್ನು ʼಜನಸಾಮಾನ್ಯರ ಆರಕ್ಷಕʼ ಎನ್ನಲಾಗಿದೆ. ನಾವೆಲ್ಲರೂ ದೇಶ ಸೇವೆಗಾಗಿ ಇಲ್ಲಿ ಸೇರಿದ್ದೇವೆ. ಅದೇ ಮನೋಭಾವದಿಂದ ಅವರು (ಕುನ್ವಾರ್) ಇಂದು ಪಕ್ಷಕ್ಕೆ ಸೇರಿಕೊಂಡಿದ್ದಾರೆʼ ಎಂದರು.</p>.<p>117 ಸದಸ್ಯ ಬಲದ ವಿಧಾನಸಭೆಗೆ 2017ರಲ್ಲಿ ನಡೆದ ಚುನಾವಣೆಯಲ್ಲಿ 77 ಸ್ಥಾನಗಳನ್ನು ಗೆದ್ದಿದ್ದ ಕಾಂಗ್ರೆಸ್ ಪೂರ್ಣ ಬಹುಮತ ಪಡೆದುಕೊಂಡಿತ್ತು.ಮೊದಲ ಬಾರಿಗೆ ಸ್ಪರ್ಧಿಸಿದ್ದ ಎಎಪಿ20 ಕ್ಷೇತ್ರಗಳಲ್ಲಿ ಜಯ ಸಾಧಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಮೃತಸರ</strong>: ಪಂಜಾಬ್ನಲ್ಲಿ ನಡೆಯುವ 2022ರ ವಿಧಾನಸಭೆ ಚುನಾವಣೆ ವೇಳೆ ಸಿಖ್ ಸಮುದಾಯದ ವ್ಯಕ್ತಿ ತಮ್ಮ ಪಕ್ಷದಿಂದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ತಿಳಿಸಿದ್ದಾರೆ.</p>.<p>ನಗರದಲ್ಲಿಮಾಧ್ಯಮದವರೊಂದಿಗೆ ಮಾತನಾಡಿದ ಅವರು,ʼಸಿಖ್ ಸಮುದಾಯದ ವ್ಯಕ್ತಿಯು ಪಂಜಾಬ್ನಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ.ಇದು ಸಿಖ್ ಸಮುದಾಯದ ಹಕ್ಕು. ಮುಖ್ಯಮಂತ್ರಿ ಅಭ್ಯರ್ಥಿ ಯಾರೆಂಬುದನ್ನು ನಂತರ ಚರ್ಚಿಸಲಾಗುವುದು. ಆದರೆ, ಅದು ಯಾರೇ ಆದರೂ ಸಿಖ್ ಸಮುದಾಯದವರೇ ಆಗಿರುತ್ತಾರೆʼ ಎಂದುಹೇಳಿದ್ದಾರೆ.</p>.<p>ಇದೇ ವೇಳೆನಿವೃತ್ತ ಐಪಿಎಸ್ ಅಧಿಕಾರಿ ಕುನ್ವಾರ್ ವಿಜಯ್ ಪ್ರತಾಪ್ ಸಿಂಗ್ ಅವರು ಅರವಿಂದ್ ಕೇಜ್ರಿವಾಲ್ ಅವರ ನೇತೃತ್ವದಲ್ಲಿ ಎಎಪಿಗೆ ಸೇರ್ಪಡೆಗೊಂಡರು. ಇದು ಮುಂಬರುವ ವಿಧಾನಸಭೆ ಚುನಾವಣೆಗೆ ಎಎಪಿಗೆಹೊಸ ಉತ್ಸಾಹ ನೀಡಿದೆ. ಈ ಬಗ್ಗೆ ಮಾತನಾಡಿರುವ ದೆಹಲಿ ಸಿಎಂ, ʼಕುನ್ವಾರ್ ವಿಜಯ್ ಪ್ರತಾಪ್ ಅವರು ರಾಜಕಾರಣಿಯಲ್ಲ. ಅವರನ್ನು ʼಜನಸಾಮಾನ್ಯರ ಆರಕ್ಷಕʼ ಎನ್ನಲಾಗಿದೆ. ನಾವೆಲ್ಲರೂ ದೇಶ ಸೇವೆಗಾಗಿ ಇಲ್ಲಿ ಸೇರಿದ್ದೇವೆ. ಅದೇ ಮನೋಭಾವದಿಂದ ಅವರು (ಕುನ್ವಾರ್) ಇಂದು ಪಕ್ಷಕ್ಕೆ ಸೇರಿಕೊಂಡಿದ್ದಾರೆʼ ಎಂದರು.</p>.<p>117 ಸದಸ್ಯ ಬಲದ ವಿಧಾನಸಭೆಗೆ 2017ರಲ್ಲಿ ನಡೆದ ಚುನಾವಣೆಯಲ್ಲಿ 77 ಸ್ಥಾನಗಳನ್ನು ಗೆದ್ದಿದ್ದ ಕಾಂಗ್ರೆಸ್ ಪೂರ್ಣ ಬಹುಮತ ಪಡೆದುಕೊಂಡಿತ್ತು.ಮೊದಲ ಬಾರಿಗೆ ಸ್ಪರ್ಧಿಸಿದ್ದ ಎಎಪಿ20 ಕ್ಷೇತ್ರಗಳಲ್ಲಿ ಜಯ ಸಾಧಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>