ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ ಸೇನಾ ನೇಮಕಾತಿ ವೇಳೆ ಅಭ್ಯರ್ಥಿಗಳಿಗೆ ತಮ್ಮ ಜಾತಿಯನ್ನು ನಮೂದಿಸಲು ಕೇಳಲಾಗುತ್ತಿದೆ ಎಂದು ಎಎಪಿಯ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಟ್ವೀಟ್ ಮೂಲಕ ಆರೋಪ ಮಾಡಿದ್ದರು. ದಲಿತರು, ಹಿಂದುಳಿದ ವರ್ಗದವರು ಮತ್ತು ಆದಿವಾಸಿಗಳಿಗೆ ಸೇನೆಯಲ್ಲಿ ಸೇವೆ ಸಲ್ಲಿಸಲು ನೀವು ಅವಕಾಶ ನೀಡುವುದಿಲ್ಲವೇ? ಎಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಪ್ರಶ್ನಿಸಿದ್ದರು.