<p><strong>ನವದೆಹಲಿ: </strong>ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಚಲನವಲನದ ಮೇಲೆ ಈಗಲೂ ನಿರ್ಬಂಧ ಹೇರಲಾಗಿದೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಬುಧವಾರ ಆರೋಪಿಸಿದೆ.</p>.<p>ಗೃಹ ಸಚಿವ ಅಮಿತ್ ಶಾ ಆಣತಿ ಮೇರೆಗೆ ಕೇಜ್ರಿವಾಲ್ ಅವರ ನಿವಾಸದ ಮುಖ್ಯದ್ವಾರವನ್ನು ಬಂದ್ ಮಾಡಲಾಗಿದೆ ಎಂದೂ ಎಎಪಿ ಆರೋಪಿಸಿದೆ. ಆದರೆ ಈ ಆರೋಪಗಳನ್ನು ದೆಹಲಿ ಪೊಲೀಸರು ನಿರಾಕರಿಸಿದ್ದಾರೆ.</p>.<p>‘ಸಭೆಯೊಂದರಲ್ಲಿ ಪಾಲ್ಗೊಳ್ಳುವ ಸಲುವಾಗಿ ಮುಖ್ಯಮಂತ್ರಿ ಕೇಜ್ರೀವಾಲ್ 11ಕ್ಕೆ ಮನೆಯಿಂದ ತೆರಳಿದ್ದಾರೆ’ ಎಂದೂ ಪೊಲೀಸರು ಹೇಳಿದ್ದಾರೆ.</p>.<p>ನೂತನ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟಿಸುತ್ತಿರುವ ರೈತರನ್ನು ಕೇಜ್ರಿವಾಲ್ ಅವರು ಭೇಟಿ ಮಾಡಿದ ನಂತರ, ಅವರನ್ನು ಪೊಲೀಸರು ಗೃಹಬಂಧನಲ್ಲಿ ಇರಿಸಿದ್ದರು ಎಂದು ಎಎಪಿ ಮಂಗಳವಾರ ಆರೋಪಿಸಿತ್ತು.</p>.<p>ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ವಕ್ತಾರ ರಾಘವ್ ಛಡ್ಡಾ, ‘ಮುಖ್ಯಮಂತ್ರಿ ಕೇಜ್ರಿವಾಲ್ ನಿವಾಸ ಸುತ್ತ ಅಘೋಷಿತ ತುರ್ತು ಪರಿಸ್ಥಿತಿಯನ್ನು ಹೇರಿದಂಥ ವಾತಾವರಣ ಇದೆ’ ಎಂದು ದೂರಿದರು.</p>.<p>‘ಕ್ರೀಡಾಂಗಣಗಳನ್ನು ರೈತರನ್ನು ಕೂಡಿ ಹಾಕುವ ಸಲುವಾಗಿ ಬಂದೀಖಾನೆಗಳನ್ನಾಗಿ ಪರಿವರ್ತಿಸಲು ನಮ್ಮ ಸರ್ಕಾರ ಅನುಮತಿ ನೀಡಲಿಲ್ಲ. ಇದೇ ಕಾರಣಕ್ಕೆ ತುರ್ತು ಪರಿಸ್ಥಿತಿಯಂಥ ವಾತಾವರಣ ಸೃಷ್ಟಿಸಲಾಗಿದೆ’ ಎಂದೂ ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಚಲನವಲನದ ಮೇಲೆ ಈಗಲೂ ನಿರ್ಬಂಧ ಹೇರಲಾಗಿದೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಬುಧವಾರ ಆರೋಪಿಸಿದೆ.</p>.<p>ಗೃಹ ಸಚಿವ ಅಮಿತ್ ಶಾ ಆಣತಿ ಮೇರೆಗೆ ಕೇಜ್ರಿವಾಲ್ ಅವರ ನಿವಾಸದ ಮುಖ್ಯದ್ವಾರವನ್ನು ಬಂದ್ ಮಾಡಲಾಗಿದೆ ಎಂದೂ ಎಎಪಿ ಆರೋಪಿಸಿದೆ. ಆದರೆ ಈ ಆರೋಪಗಳನ್ನು ದೆಹಲಿ ಪೊಲೀಸರು ನಿರಾಕರಿಸಿದ್ದಾರೆ.</p>.<p>‘ಸಭೆಯೊಂದರಲ್ಲಿ ಪಾಲ್ಗೊಳ್ಳುವ ಸಲುವಾಗಿ ಮುಖ್ಯಮಂತ್ರಿ ಕೇಜ್ರೀವಾಲ್ 11ಕ್ಕೆ ಮನೆಯಿಂದ ತೆರಳಿದ್ದಾರೆ’ ಎಂದೂ ಪೊಲೀಸರು ಹೇಳಿದ್ದಾರೆ.</p>.<p>ನೂತನ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟಿಸುತ್ತಿರುವ ರೈತರನ್ನು ಕೇಜ್ರಿವಾಲ್ ಅವರು ಭೇಟಿ ಮಾಡಿದ ನಂತರ, ಅವರನ್ನು ಪೊಲೀಸರು ಗೃಹಬಂಧನಲ್ಲಿ ಇರಿಸಿದ್ದರು ಎಂದು ಎಎಪಿ ಮಂಗಳವಾರ ಆರೋಪಿಸಿತ್ತು.</p>.<p>ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ವಕ್ತಾರ ರಾಘವ್ ಛಡ್ಡಾ, ‘ಮುಖ್ಯಮಂತ್ರಿ ಕೇಜ್ರಿವಾಲ್ ನಿವಾಸ ಸುತ್ತ ಅಘೋಷಿತ ತುರ್ತು ಪರಿಸ್ಥಿತಿಯನ್ನು ಹೇರಿದಂಥ ವಾತಾವರಣ ಇದೆ’ ಎಂದು ದೂರಿದರು.</p>.<p>‘ಕ್ರೀಡಾಂಗಣಗಳನ್ನು ರೈತರನ್ನು ಕೂಡಿ ಹಾಕುವ ಸಲುವಾಗಿ ಬಂದೀಖಾನೆಗಳನ್ನಾಗಿ ಪರಿವರ್ತಿಸಲು ನಮ್ಮ ಸರ್ಕಾರ ಅನುಮತಿ ನೀಡಲಿಲ್ಲ. ಇದೇ ಕಾರಣಕ್ಕೆ ತುರ್ತು ಪರಿಸ್ಥಿತಿಯಂಥ ವಾತಾವರಣ ಸೃಷ್ಟಿಸಲಾಗಿದೆ’ ಎಂದೂ ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>