ಖಾಲಿಸ್ತಾನ ಪರ ಟ್ವೀಟ್ ಮಾಡಿದ ನಾಯಕನನ್ನು ಪಕ್ಷದಿಂದ ಉಚ್ಚಾಟಿಸಿದ ಎಎಪಿ

ಶಿಮ್ಲಾ: ‘ಖಾಲಿಸ್ತಾನ ಪರ’ ಟ್ವೀಟ್ ಮಾಡಿದ ಆರೋಪದಲ್ಲಿ ಪಕ್ಷದ ಹಿಮಾಚಲ ಪ್ರದೇಶ ಘಟಕದ ಸಾಮಾಜಿಕ ಮಾಧ್ಯಮ ಉಸ್ತುವಾರಿ ಹರ್ಪ್ರೀತ್ ಸಿಂಗ್ ಬೇಡಿ ಅವರನ್ನು ಆಮ್ ಆದ್ಮಿ ಪಕ್ಷವು (ಎಎಪಿ) ಉಚ್ಚಾಟನೆ ಮಾಡಿದೆ.
ಬೇಡಿ ಬಹಿರಂಗವಾಗಿ ಖಾಲಿಸ್ತಾನವನ್ನು ಬೆಂಬಲಿಸುತ್ತಿದ್ದಾರೆ. ಕೆಲವು ವರ್ಷಗಳ ಹಿಂದೆ ಖಾಲಿಸ್ತಾನವನ್ನು ಬೆಂಬಲಿಸಿ ಸರಣಿ ಟ್ವೀಟ್ ಮಾಡಿದ್ದಾರೆ ಎಂದು ಭಾನುವಾರ ಬಿಜೆಪಿ ಆರೋಪಿಸಿತ್ತು.
ಪಟಿಯಾಲ ಹಿಂಸಾಚಾರ: 2 ದಿನಗಳ ಬಳಿಕ ಪ್ರಮುಖ ಸಂಚುಕೋರ ಸೇರಿ ಆರು ಮಂದಿ ಬಂಧನ
‘ಹರ್ಪ್ರೀತ್ ಸಿಂಗ್ ಬೇಡಿ ಅವರು ಟ್ವೀಟ್ನಲ್ಲಿ ಉಲ್ಲೇಖಿಸಿರುವ ವಿಚಾರಗಳು ಆಮ್ ಆದ್ಮಿ ಪಕ್ಷದ ಸಿದ್ಧಾಂತಕ್ಕೆ ವಿರುದ್ಧವಾಗಿವೆ. ಯಾವುದೇ ರೀತಿಯಲ್ಲಿಯೂ ಪಕ್ಷದ ಅಭಿಪ್ರಾಯವನ್ನು ಪ್ರತಿಧ್ವನಿಸುವುದಿಲ್ಲ’ ಎಂದು ಎಎಪಿ ಟ್ವೀಟ್ ಮಾಡಿದೆ.
Views expressed by Harpreet Singh Bedi in his tweets are against Aam Aadmi Party's ideology & do not represent the opinion of the party in any way. (1/2)
— AAP Himachal Pradesh (@AAPHimachal_) May 1, 2022
‘ತಕ್ಷಣದಿಂದ ಜಾರಿಗೆ ಬರುವಂತೆ ಅವರನ್ನು (ಹರ್ಪ್ರೀತ್ ಸಿಂಗ್ ಬೇಡಿ) ಎಲ್ಲ ಹುದ್ದೆಗಳಿಂದ ವಜಾಗೊಳಿಸಲಾಗಿದೆ’ ಎಂದು ಎಎಪಿ ಉಲ್ಲೇಖಿಸಿದೆ.
‘ಎಎಪಿಯು ನಮ್ಮ ದೇಶದ ಏಕತೆ, ಸಮಗ್ರತೆಯಲ್ಲಿ ನಂಬಿಕೆ ಇರಿಸಿದೆ. ನಮ್ಮ ದೇಶದ ಹಿತಾಸಕ್ತಿಗೆ ವಿರುದ್ಧವಾಗಿ ಯಾರು ಏನೇ ಬರೆದರೂ ಸಹಿಸುವುದಿಲ್ಲ’ ಎಂದು ಮತ್ತೊಂದು ಟ್ವೀಟ್ನಲ್ಲಿ ಉಲ್ಲೇಖಿಸಿದೆ.
ಪಟಿಯಾಲ ಘರ್ಷಣೆ: ಮೊಬೈಲ್ ಇಂಟರ್ನೆಟ್ ಸೇವೆಗಳ ಮರುಸ್ಥಾಪನೆ
ಬೇಡಿ ಅವರು 2012ರಿಂದ 2020ರ ಅವಧಿಯಲ್ಲಿ ಭಾರತ ವಿರೋಧಿ ಮತ್ತು ಖಾಲಿಸ್ತಾನ ಪರವಾಗಿ ಸರಣಿ ಟ್ವೀಟ್ಗಳನ್ನು ಮಾಡಿದ್ದರು ಎನ್ನಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.