ಅಮಿತ್ ಶಾ ನಿವಾಸದ ಎದುರು ಧರಣಿಗೆ ಯೋಜನೆ: ಎಎಪಿ ನಾಯಕರ ಮೇಲೆ ಹಲ್ಲೆ, ಬಂಧನ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ನಿವಾಸದ ಎದುರು ಧರಣಿಗೆ ಯೋಜನೆ ರೂಪಿಸಿದ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷದ ನಾಯಕ ರಾಘವ್ ಛಡ್ಡಾ, ಅತಿಶಿ ಸೇರಿದಂತೆ ಹಲವು ನಾಯಕರನ್ನು ದೆಹಲಿ ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ದೆಹಲಿ ಜಲ ಮಂಡಳಿ ಉಪಾಧ್ಯಕ್ಷರೂ ಆಗಿರುವ ಛಡ್ಡಾ ಅವರನ್ನು ರಾಜೇಂದ್ರ ನಗರ ಪೊಲೀಸರು ಬಂಧಿಸಿದ್ದಾರೆಂದು ಎಎಪಿ ತಿಳಿಸಿದೆ.
ಇದೇ ವೇಳೆ ಅಮಿತ್ ಶಾ ನಿವಾಸದ ಎದುರು ಪ್ರತಿಭಟನೆಗೆ ಮುಂದಾದ ಎಎಪಿ ನಾಯಕಿ ಅತಿಶಿ ಅವರ ಮೇಲೆ ದೆಹಲಿ ಪೊಲೀಸರು ಹಲ್ಲೆ ನಡೆಸಿ, ವಶಕ್ಕೆ ಪಡೆದಿದ್ದಾರೆ ಎಂದು ಎಎಪಿ ವಿಡಿಯೊ ಟ್ವೀಟ್ ಮಾಡಿದೆ.
AAP Leader @AtishiAAP manhandled by Delhi Police for peaceful protest outside LG's residence.
AAP demands investigation in the massive corruption of ₹2500 crore by BJP ruled MCDpic.twitter.com/DbrGZnwDGo
— AAP (@AamAadmiParty) December 13, 2020
ಇನ್ನುಳಿದ ಎಎಪಿ ಮುಖಂಡರಾದ ಸಂಜೀವ್ ಝಾ, ರೀತುರಾಜ್ ಗೋವಿಂದ್ ಮತ್ತು ಕುಲದೀಪ್ ಕುಮಾರ್ ಅವರನ್ನು ಬಂಧಿಸಿದ್ದೇವೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
After MLA @MLARituraj and MLAs @raghav_chadha, @KuldeepKumarAAP and @Sanjeev_aap have also been arrested by Delhi police for a peaceful protest against misappropriation of Rs. 2457 cr in BJP-led MCD.
Amit Shah and his police can put us in jail, but they can't suppress our will. pic.twitter.com/F00swAupZo
— AAP (@AamAadmiParty) December 13, 2020
ದೆಹಲಿ ಮಹಾನಗರ ಪಾಲಿಕೆಯಲ್ಲಿ ₹2,400 ಕೋಟಿಗೂ ಅಧಿಕ ಹಣ ದುರುಪಯೋಗವಾಗಿದೆ ಎಂಬ ಆರೋಪ ಕೇಳಿಬಂದಿದೆ. ಆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿವಾಸದ ಎದುರು ಧರಣಿ ನಡೆಸುವುದಾಗಿ ಆಮ್ ಆದ್ಮಿ ಪಕ್ಷ ಶನಿವಾರ ತಿಳಿಸಿತ್ತು.
ಬಿಜೆಪಿ ಆಡಳಿತವಿರುವ ಪುರಸಭೆ ನಿಗಮಗಳ ನಾಯಕರು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನಿವಾಸದ ಹೊರಗೆ ಧರಣಿ ಕುಳಿತಿರುವ ಸಮಯದಲ್ಲೇ ಎಎಪಿ ಈ ನಿರ್ಧಾರ ಕೈಗೊಂಡಿದೆ.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.