ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಸಭೆಯಲ್ಲಿ ಗದ್ದಲ: ಕಲಾಪದಿಂದ ಎಎಪಿಯ ಮೂವರು ಸಂಸದರ ಅಮಾನತು

Last Updated 3 ಫೆಬ್ರುವರಿ 2021, 9:59 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆ ಕುರಿತಾಗಿ ಕಲಾಪ ನಡೆಯುತ್ತಿದ್ದ ವೇಳೆ ಅಡ್ಡಿಯನ್ನುಂಟು ಮಾಡಿದ ಆಮ್‌ ಆದ್ಮಿ ಪಕ್ಷದ(ಎಎಪಿ) ಮೂವರು ಸಂಸದರನ್ನು ಸಭಾಧ್ಯಕ್ಷರು ಒಂದು ದಿನ ಮಟ್ಟಿಗೆ ಅಮಾನತು ಮಾಡಿದ್ದಾರೆ.

ರಾಷ್ಟ್ರಪತಿ ಅವರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಯ ವೇಳೆ ಎಎ‍ಪಿ ಸಂಸದರು, ಮೇಲ್ಮನೆಯ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಸಭಾಧ್ಯಕ್ಷರಾದ ಎಂ.ವೆಂಕಯ್ಯನಾಯ್ಡು ಅವರು ಹಲವು ಬಾರಿ ಸಂಸದರಿಗೆ ತಮ್ಮ ಸ್ಥಾನಗಳಿಗೆ ಮರಳುವಂತೆ ಸೂಚಿಸಿದ್ದಾರೆ. ಆದರೆ ಇದಕ್ಕೆ ಕಿವಿಗೊಡದ ಎಎಪಿ ಸಂಸದರು, ತಮ್ಮ ‍ಪ್ರತಿಭಟನೆಯನ್ನು ಮುಂದುವರಿಸಿದರು.

ಈ ಹಿನ್ನೆಲೆಯಲ್ಲಿ ಸಭಾಧ್ಯಕ್ಷರು, ಸಂಜೀವ್‌ ಸಿಂಗ್‌ ಸೇರಿದಂತೆ ಮೂವರು ಸಂಸದರನ್ನು ಒಂದು ದಿನದ ಮಟ್ಟಿಗೆ ಅಮಾನತು ಮಾಡಿ, ಅವರನ್ನು ರಾಜ್ಯಸಭೆಯಿಂದ ಹೊರನಡೆಯುವಂತೆ ಸೂಚಿಸಿದ್ದಾರೆ. ಆದರೂ ಸಂಸದರು ಪ್ರತಿಭಟನೆ ಮುಂದುವರಿಸಿದ ಕಾರಣ, ಕಲಾಪವನ್ನು ಸ್ವಲ್ಪ ಸಮಯಕ್ಕೆ ಮುಂದೂಡಲಾಯಿತು.

ಕಲಾಪ ಪುನರಾರಂಭಗೊಂಡ ಬಳಿಕವೂ ಸಂಸದರು ಅಲ್ಲೇ ಇದ್ದ ಕಾರಣ ಅವರನ್ನು ರಾಜ್ಯಸಭೆಯಿಂದ ಹೊರ ಕರೆದುಕೊಂಡು ಹೋಗುವಂತೆ ಸಭಾಧ್ಯಕ್ಷರು ಮಾರ್ಷಲ್‌ಗಳಿಗೆ ಸೂಚಿಸಿದರು.

ಸಂಜಯ್‌ ಸಿಂಗ್‌, ಸುಶೀಲ್‌ ಕುಮಾರ್‌ ಗುಪ್ತಾ, ಎನ್‌.ಡಿ ಗುಪ್ತಾ ಅವರನ್ನು 255 ನೇ ನಿಯಮ ಪ್ರಕಾರ ಒಂದು ದಿನದ ಮಟ್ಟಿಗೆ ಅಮಾನತು ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT