ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಜಾಬ್: ಎಎಪಿ ಪುರಸಭೆ ಸದಸ್ಯನ ಗುಂಡಿಕ್ಕಿ ಹತ್ಯೆ

Last Updated 31 ಜುಲೈ 2022, 10:30 IST
ಅಕ್ಷರ ಗಾತ್ರ

ಚಂಡೀಗಡ: ಆಮ್ ಆದ್ಮಿ ಪಕ್ಷದ (ಎಎಪಿ) ಪುರಸಭೆ ಸದಸ್ಯ ಮೊಹಮ್ಮದ್ ಅಕ್ಬರ್ ಎಂಬುವವರನ್ನು ಪಂಜಾಬ್‌ನ ಮಲೆರ್ಕೊಟ್ಲಾದಲ್ಲಿ ಭಾನುವಾರ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಕ್ಬರ್ ಅವರು ಜಿಮ್‌ನಲ್ಲಿದ್ದಾಗ ಸಮೀಪದಿಂದ ಗುಂಡಿನ ದಾಳಿ ನಡೆಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

‘ಜಿಮ್‌ಗೆ ಬಂದ ವ್ಯಕ್ತಿಯೊಬ್ಬ ಅಕ್ಬರ್ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ. ಅಕ್ಬರ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗುಂಡಿನ ದಾಳಿ ನಡೆಸಿದ ದುಷ್ಕರ್ಮಿ ಪರಾರಿಯಾಗಿದ್ದಾನೆ’ ಎಂದು ಮಲೆರ್ಕೊಟ್ಲಾ ಎಸ್‌ಎಸ್‌ಪಿ ಅನ್ವಿತ್ ಕೌರ್ ಸಿಧು ಹೇಳಿದ್ದಾರೆ.

ದಾಳಿಕೋರರ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT