ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರಪತಿ ಚುನಾವಣೆ: ಬೆಂಬಲದ ಬಗ್ಗೆ ನಾಳೆ ನಿಲುವು ಪ್ರಕಟಿಸಲಿರುವ ಎಎಪಿ

Last Updated 15 ಜುಲೈ 2022, 12:43 IST
ಅಕ್ಷರ ಗಾತ್ರ

ನವದೆಹಲಿ: ಆಮ್‌ ಆದ್ಮಿ ಪಕ್ಷದ ರಾಜಕೀಯ ವ್ಯವಹಾರಗಳ ಸಮಿತಿ ಸಭೆ ಶನಿವಾರ ನಡೆಯಲಿದ್ದು, ರಾಷ್ಟ್ರಪತಿ ಚುನಾವಣೆಯಲ್ಲಿ ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ಅವರನ್ನು ಬೆಂಬಲಿಸಬೇಕೊ, ಬೇಡವೊ ಎಂಬ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದೆ.

ಒಮ್ಮತದ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವ ಸಂಬಂಧ ಕಳೆದ ತಿಂಗಳು ನಡೆದ ವಿರೋಧ ಪಕ್ಷಗಳ ನಾಯಕರ ಸಭೆಗೆಅರವಿಂದ್ ಕೇಜ್ರಿವಾಲ್ ಗೈರು ಹಾಜರಾಗಿದ್ದರು. ಅದರೆ, ಯಶವಂತ ಸಿನ್ಹಾ ಅವರನ್ನು ವಿರೋಧ ಪಕ್ಷಗಳು ಅಭ್ಯರ್ಥಿಯಾಗಿ ಘೋಷಿಸಿದ ಬಳಿಕ, ಅವರನ್ನು ಬೆಂಬಲಿಸುವುದಾಗಿ ಎನ್‌ಸಿಪಿ ನಾಯಕ ಶರದ್‌ ಪವಾರ್‌ ಅವರಿಗೆ ಎಎಪಿ ತಿಳಿಸಿತ್ತು ಎನ್ನಲಾಗಿದೆ.

ಕಾಂಗ್ರೆಸ್ ತೊರೆದು ಈಚೆಗೆ ಸಮಾಜವಾದಿ ಪಕ್ಷದ ಬೆಂಬಲದೊಂದಿಗೆ ಪಕ್ಷೇತರ ಅಭ್ಯರ್ಥಿಯಾಗಿ ರಾಜ್ಯಸಭೆಗೆ ಆಯ್ಕೆಯಾಗಿರುವ ಕಪಿಲ್ ಸಿಬಲ್ ಅವರನ್ನು ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಮಾಡುವಂತೆ ಕೇಜ್ರಿವಾಲ್ ಈ ಹಿಂದೆ ಸೂಚಿಸಿದ್ದರು. ಆದರೆ, ವಿರೋಧ ಪಕ್ಷಗಳು ಇದಕ್ಕೆ ಒಪ್ಪಿಗೆ ನೀಡಲಿಲ್ಲ ಎಂದು ಮೂಲಗಳು ತಿಳಿಸಿವೆ.

ಜೂನ್ 21ರಂದು ನಡೆದ ವಿರೋಧ ಪಕ್ಷಗಳ ಎರಡನೇ ಸಭೆಗೂ ಮುಂಚೆಕೇಜ್ರಿವಾಲ್‌ ಅವರು ಸಿಬಲ್‌ ಅವನ್ನು ಅಭ್ಯರ್ಥಿಯನ್ನಾಗಿ ಮಾಡುವಂತೆ ಪವಾರ್‌ಗೆ ಸಲಹೆ ಮಾಡಿದ್ದರು. ಇದಾದ ಬಳಿಕ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೂ ಈ ಬಗ್ಗೆ ತಿಳಿಸಿದ್ದರು ಎಂದು ತಿಳಿದುಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT