ಈ ವಿಚಾರವಾಗಿ ಮಾಧ್ಯಮ ಗೋಷ್ಠಿ ನಡೆಸಿರುವ ಎಎಪಿ ನಾಯಕಿ ಅತಿಶಿ, 'ದೆಹಲಿ ಮಹಾನಗರ ಪಾಲಿಕೆಯಲ್ಲಿ ₹2,400 ಕೋಟಿಗೂ ಅಧಿಕ ಹಣ ದುರಪಯೋಗವಾಗಿದೆ. ಕೇಂದ್ರ ಸರ್ಕಾರವು ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು. ಅಲ್ಲಿಯವರೆಗೂ, ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿವಾಸಗಳ ಎದುರು ಎಎಪಿ ಧರಣಿ ನಡೆಸಲಿದೆ' ಎಂದು ತಿಳಿಸಿದ್ದಾರೆ.