‘ಆಮ್ ಆದ್ಮಿ ಕಾರ್ಯಕರ್ತರು ಗೇಟ್ ಮುರಿದು ಒತ್ತಾಯಪೂರ್ವಕವಾಗಿ ಬಿಜೆಪಿ ಕಚೇರಿಗೆ ನುಗ್ಗಿದ್ದಾರೆ. ಈ ಸಂದರ್ಭ ಉಭಯ ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಘರ್ಷಣೆ ಸಂಭವಿಸಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಬಳಿಕ ಸ್ಥಳಕ್ಕೆ ತೆರಳಿದ ನಾವು ಮಹಿಳೆಯರು ಸೇರಿ 20 ಮಂದಿ ಆಮ್ ಆದ್ಮಿ ಕಾರ್ಯಕರ್ತರನ್ನು ಬಂಧಿಸಿದ್ದೇವೆ. ನಮ್ಮ ಲಾಠಿ ಚಾರ್ಜ್ನಿಂದ ಯಾರೊಬ್ಬರು ಗಾಯಗೊಂಡಿಲ್ಲ’ಎಂದು ರಾಣಾ ಹೇಳಿದ್ದಾರೆ.
ಆಮ್ ಆದ್ಮಿ ಕಾರ್ಯಕರ್ತರಾದ ಇಟಾಲಿಯಾ, ಗಧ್ವಿ ಸೇರಿದಂತೆ ಹಲವರ ವಿರುದ್ಧ ಎಫ್ಐಆರ್ ದಾಖಲಿಸಲು ನಿರ್ಧರಿಸಲಾಗಿದ್ದು, ಹೆಚ್ಚಿನ ವಿಚಾರಣೆಗೆ ಕರೆದೊಯ್ಯಲಾಗಿದೆ ಎಂದು ಅವರು ತಿಳಿಸಿದ್ದಾರೆ.