ಎಂಎಸ್ಪಿಯನ್ನು ಶಾಸನಬದ್ಧಗೊಳಿಸಬೇಕು ಎಂಬ ರೈತರ ಬೇಡಿಕೆಯನ್ನು ಒಪ್ಪಿಕೊಳ್ಳುವ ಅಗತ್ಯವನ್ನು ಪತ್ರದಲ್ಲಿ ಒತ್ತಿ ಹೇಳಿರುವ ವರುಣ್, ‘ಈಬೇಡಿಕೆ ಈಡೇರದೇ ರೈತರ ಚಳವಳಿ ಕೊನೆಗೊಳ್ಳುವುದಿಲ್ಲ. ಈಗಾಗಲೇ ಅವರಲ್ಲಿ ಈ ಬಗ್ಗೆ ವ್ಯಾಪಕವಾದ ಆಕ್ರೋಶವಿದೆ. ಅದು ಒಂದಲ್ಲ ಒಂದು ರೂಪದಲ್ಲಿ ಹೊರಹೊಮ್ಮುತ್ತಲೇ ಇರುತ್ತದೆ. ಆದ್ದರಿಂದ ರೈತರ ಬೇಡಿಕೆ ಈಡೇರಿಸಿ’ ಎಂದು ಅವರು ಮನವಿ ಮಾಡಿದ್ದಾರೆ.