‘ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ಕೋವಿಡ್ ರೋಗಿಗಳು ಮೃತಪಟ್ಟರೆ, ಅದು ಕ್ರಿಮಿನಲ್ ಅಪರಾಧ’ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿತ್ತು. ಇದಕ್ಕೆ ಪ್ರತಿಕ್ರಿಯಿಸಿರುವ ಪ್ರಿಯಾಂಕಾ, ‘ಅಲಹಾಬಾದ್ ಹೈಕೋರ್ಟ್ ಸರ್ಕಾರದ ಕಾರ್ಯವೈಖರಿಗೆ ಕನ್ನಡಿ ಹಿಡಿದಿದೆ. ಉತ್ತರ ಪ್ರದೇಶ ಸರ್ಕಾರ ನಿರಂತರವಾಗಿ ಆಮ್ಲಜನಕ ಕೊರತೆಯಿಲ್ಲ ಎಂದು ಹೇಳುತ್ತಾ ಬಂದಿದೆ. ಈ ಬಗ್ಗೆ ಯಾರಾದರೂ ಮಾತನಾಡಿದರೆ ಅವರನ್ನೂ ಬೆದರಿಸುತ್ತದೆ’ ಎಂದು ಆರೋಪಿಸಿದ್ದಾರೆ.