ದೆಹಲಿ ಹೊರಭಾಗದ ಸುಲ್ತಾನ್ಪುರಿಯಲ್ಲಿ ಇತ್ತೀಚೆಗೆ ನಡೆದಿದ್ದ ಘಟನೆಯಲ್ಲಿ ಅಂಜಲಿ ಸಿಂಗ್ ಎಂಬುವರು ಮೃತಪಟ್ಟಿದ್ದರು. ಕಾರಿನಡಿ ಸಿಲುಕಿದ್ದ ಆಕೆಯ ಮೃತದೇಹವನ್ನು ಸುಮಾರು 12 ಕಿ.ಮೀ.ವರೆಗೂ ಎಳೆದೊಯ್ಯಲಾಗಿತ್ತು. ಈ ಸಂಬಂಧ ಪೊಲೀಸರು ಐವರನ್ನು ಬಂಧಿಸಿದ್ದರು. ಆರೋಪಿಗಳಿಗೆ ರಕ್ಷಣೆ ನೀಡಿದ್ದ ಹಿನ್ನೆಲೆಯಲ್ಲಿ ಅಶುತೋಷ್ ಹಾಗೂ ಅಂಕುಶ್ ಖನ್ನಾ ಎಂಬುವರನ್ನೂ ವಶಕ್ಕೆ ಪಡೆದಿದ್ದರು.