‘ಮೂವಿ ಮಾಫಿಯಾ, ಸುಶಾಂತ್ ಸಿಂಗ್ ರಜಪೂತ್ ಕೊಲೆ ಮತ್ತು ಮಾದಕ ದ್ರವ್ಯ ದಂಧೆಯ ಕುರಿತು ಬಯಲಿಗೆಳೆಯಲು ನಾನು ಮುಂದಾಗಿದ್ದೇ ಮುಖ್ಯಮಂತ್ರಿ ಅವರಿಗೆ ಸಹಿಸಿಕೊಳ್ಳಲಾಗಲಿಲ್ಲ. ಏಕೆಂದರೆ, ಅವರ ಪ್ರೀತಿಯ ಮಗ ಆದಿತ್ಯ ಠಾಕ್ರೆ ಈ ಜಾಲದೊಂದಿಗೆ ಸ್ನೇಹ ಹೊಂದಿದ್ದಾರೆ. ಹಾಗಾಗಿ ನಾನು ಮಾಡಿರುವುದು ಅವರಿಗೆ ದೊಡ್ಡ ಅಪರಾಧ ಎನಿಸಿದೆ.ಈಗ ಅವರು ನನ್ನನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರಯತ್ನಿಸುತ್ತಿದ್ದಾರೆ. ಸರಿ ನೋಡೋಣ, ಯಾರು ಯಾರನ್ನು ಬಿಕ್ಕಟ್ಟಿಗೆ ಸಿಲುಕಿಸುತ್ತಾರೆ’ ಎಂದು ಕಂಗನಾ ಟ್ವೀಟ್ ಮೂಲಕ ಸವಾಲು ಹಾಕಿದ್ದಾರೆ.