‘ನ್ಯಾಯಾಲಯ ಹಾಗೂ ಅಭಿಯೋಜಕರು ಹೊಂದಿಕೊಳ್ಳುವ ರೀತಿಯಲ್ಲಿ ಕಾರ್ಯನಿರ್ವಹಿಸಿದೇ ಇದ್ದರೆ, ಕಾನೂನಿನ ಕೈಯಿಂದ ಅಪರಾಧಿಗಳು ತಪ್ಪಿಸಿಕೊಂಡು, ನಿರಪರಾಧಿಗಳು ಶಿಕ್ಷೆಗೆ ಒಳಗಾಗುವ ಸಾಧ್ಯತೆ ಇದೆ’ ಎಂದು ಅಭಿಪ್ರಾಯಪಟ್ಟ ನ್ಯಾಯಾಲಯವು ಅರ್ಜಿಗಳನ್ನು ತಿರಸ್ಕರಿಸಿತು. ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಾಗುವಂತೆ ವಿಚಾರಣೆಯ ತೀರ್ಪಿಗೆ ವಾರದ ತಡೆ ನೀಡಬೇಕು ಎಂದು ಕೋರಿ ನಟಿ ಹಾಗೂ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನೂ ಹೈಕೋರ್ಟ್ ತಿರಸ್ಕರಿಸಿತು.