ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಂಸಾಚಾರ: ಭದ್ರತೆ ಕೋರಿ ಅದಾನಿಯಿಂದ ಕೇರಳ ಹೈಕೋರ್ಟ್‌ಗೆ ಅರ್ಜಿ

Last Updated 2 ಡಿಸೆಂಬರ್ 2022, 15:44 IST
ಅಕ್ಷರ ಗಾತ್ರ

ಕೊಚ್ಚಿ:ಇತ್ತೀಚೆಗೆ ಹಿಂಸಾತ್ಮಕ ಪ್ರತಿಭಟನೆಗಳಿಂದಾಗಿ ಕಾಮಗಾರಿ ಸ್ಥಗಿತಗೊಂಡಿರುವ ತಿರುವನಂತಪುರದ ವಿಝಿಂಜಂ ಬಂದರಿನಲ್ಲಿ ನಿರ್ಮಾಣ ಕಾರ್ಯವನ್ನು ಮುಂದುವರಿಸುವ ಸಲುವಾಗಿ ಕೇಂದ್ರೀಯ ಭದ್ರತಾ ಪಡೆಗಳ ನೆರವು ಕೋರಿ ಅದಾನಿ ಸಮೂಹವು ಶುಕ್ರವಾರ ಕೇರಳ ಹೈಕೋರ್ಟ್‌ಗೆ ಮನವಿ ಸಲ್ಲಿಸಿದೆ.

ಪ್ರತಿಭಟನೆಯ ಕಾರಣದಿಂದ ಕಾಮಗಾರಿಗೆ ತಡೆಯೊಡ್ಡುವಿಕೆ ಮತ್ತು ದಿಗ್ಬಂಧನದ ವಿರುದ್ಧ ಸಲ್ಲಿಸಿದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಅನು ಶಿವರಾಮನ್ ಅವರು, ಕೇಂದ್ರೀಯ ಭದ್ರತಾ ಪಡೆಗಳನ್ನು ನಿಯೋಜಿಸುವ ಸಾಧ್ಯತೆಯ ಬಗ್ಗೆ ಚರ್ಚಿಸಲು ಕೇಂದ್ರ ಸರ್ಕಾರ ಮತ್ತು ಕೇರಳ ಸರ್ಕಾರಗಳಿಗೆ ಸೂಚನೆ ನೀಡಿದ್ದಾರೆ.

ಅದಾನಿ ಸಮೂಹವು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಉತ್ತರವನ್ನು ಸಲ್ಲಿಸುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ನ್ಯಾಯಾಲಯವು ಸೂಚಿಸಿದ್ದು, ಡಿಸೆಂಬರ್ 7ಕ್ಕೆ ಪ್ರಕರಣದ ವಿಚಾರಣೆಯನ್ನು ಮುಂದೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT