ವಿಝಿಞಾಂ ಪ್ರಾಂತ್ಯದಲ್ಲಿ ನಡೆದ ಈ ಗಲಭೆಯಲ್ಲಿ 30ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದು, ಹಲವು ವಾಹನಗಳು ಹಾನಿಗೊಂಡಿದ್ದವು. ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದ ಗುಂಪು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿ, ಅಶ್ರವಾಯು ಪ್ರಯೋಗಿಸಿದ್ದರು. ಸದ್ಯ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದು, ಪ್ರತಿಭಟನಾ ಸ್ಥಳದ ಸುತ್ತಲೂ ಪೊಲೀಸ್ ಬಿಗಿಬಂದೋಬಸ್ತ್ ಏರ್ಪಡಿಸಲಾಗಿದೆ.
ಶನಿವಾರದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ತಿರುವನಂತಪುರಂ ಆರ್ಚ್ಬಿಷಪ್ ಥಾಮಸ್ ನೆಟ್ಟೊ, ಸಹಾಯಕ ಬಿಷಪ್ ಆರ್ ಕ್ರಿಸ್ಟುದಾಸ್ ಮತ್ತು ಆರ್ಚ್ಡಯಾಸಿಸ್ನ ಹಲವಾರು ಪಾದ್ರಿಗಳ ವಿರುದ್ಧ ಪ್ರಕರಣ ದಾಖಲಿಸಿ, ಐವರು ಮೀನುಗಾರರನ್ನು ವಶಕ್ಕೆ ಪಡೆದಿದ್ದರು.