ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರು, ಬಹುಮತದ ತೀರ್ಪಿಗೆ ಭಿನ್ನವಾದ ನಿಲುವನ್ನು ಇಲ್ಲಿಯೂ ತಳೆದರು. ಸರ್ಕಾರಕ್ಕೆ ಸಂಬಂಧಿಸಿದ ಅಥವಾ ಸರ್ಕಾರವನ್ನು ರಕ್ಷಿಸುವ ಸಚಿವರ ಹೇಳಿಕೆಗಳು ಒಂದು ವೇಳೆ ಅವಹೇಳಕಾರಿಯಾಗಿದ್ದರೆ, ಅದಕ್ಕೆ ಸರ್ಕಾರವೇ ಜವಾಬ್ದಾರಿಯಾಗಿರಲಿದೆ ಎಂದು ತಿಳಿಸಿದರು. ಆದರೆ, ಈಗಿರುವ ನಿರ್ಬಂಧಗಳಿಗೆ ಮಿಗಿಲಾಗಿ ಹೆಚ್ಚಿನ ನಿರ್ಬಂಧ ವಿಧಿಸಲು ಸಾಧ್ಯವಿಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.