<p><strong>ಕೋಲ್ಕತ್ತ</strong>: ‘ಪ್ರಭಾವಿ ನಾಯಕ ಸುವೇಂದು ಅಧಿಕಾರಿ ಅವರು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ನ (ಟಿಎಂಸಿ) ನಾಯಕತ್ವದ ವಿರುದ್ಧ ಮತ್ತೆ ಮುನಿಸಿಕೊಂಡಿದ್ದಾರೆ’ ಎಂದು ಅವರ ಆಪ್ತರು ಹೇಳಿದ್ದಾರೆ.</p>.<p>‘ಪಕ್ಷದ ನಾಯಕತ್ವದ ವಿರುದ್ಧ ಅಸಮಾಧಾನಗೊಂಡು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸುವೇಂದು ಅವರ ಮನವೊಲಿಸಲಾಗಿದ್ದು ಅವರು ಪಕ್ಷದಲ್ಲೇ ಮುಂದುವರಿಯಲಿದ್ದಾರೆ’ ಎಂದು ಟಿಎಂಸಿ ಸಂಸದ ಸೌಗತಾ ರಾಯ್ ಬುಧವಾರ ತಿಳಿಸಿದ್ದರು.</p>.<p>ಸೌಗತಾ ರಾಯ್, ಅಭಿಷೇಕ್ ಮುಖರ್ಜಿ, ಸುದೀಪ್ ಬಂಡೋಪಾಧ್ಯಾಯ ಮತ್ತು ಪ್ರಶಾಂತ್ ಕಿಶೋರ್ ಅವರನ್ನೊಳಗೊಂಡ ತಂಡವು ಮಂಗಳವಾರ ರಾತ್ರಿ ಸುವೇಂದು ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿತ್ತು.</p>.<p>‘ಪಕ್ಷದೊಳಗೆ ತಲೆದೋರಿದ್ದ ಬಿಕ್ಕಟ್ಟು ಶಮನವಾಗಿದೆ. ಸುವೇಂದು, ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ಶ್ರಮಿಸಲಿದ್ದಾರೆ. ಕೆಲವರು ಪಕ್ಷ ಒಡೆಯುವ ಕೆಲಸಕ್ಕೆ ಮುಂದಾಗಿದ್ದು ಅವರ ಕಾರ್ಯ ಫಲಿಸುವುದಿಲ್ಲ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಉತ್ತರ ನೀಡುತ್ತೇವೆ’ ಎಂದು ರಾಯ್ ಹೇಳಿದ್ದರು.</p>.<p>‘ಮಂಗಳವಾರ ನಡೆದ ರಹಸ್ಯ ಸಭೆಯ ಮಾಹಿತಿಗಳನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿರುವುದು ಹಾಗೂ ತಮ್ಮ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡದಿರುವುದರಿಂದ ಸುವೇಂದು ಮತ್ತೆ ಬೇಸರಗೊಂಡಿದ್ದಾರೆ’ ಎಂದು ಹೇಳಲಾಗಿದೆ.</p>.<p>2011ರಲ್ಲಿ ಮಮತಾ ಬ್ಯಾನರ್ಜಿ ಅವರು ಅಧಿಕಾರಕ್ಕೇರಲು ಕಾರಣವಾಗಿದ್ದ ‘ನಂದಿ ಗ್ರಾಮ ಚಳವಳಿಯ’ ಪ್ರಮುಖ ನಾಯಕರಾಗಿದ್ದ ಸುವೇಂದು, ಸಚಿವ ಸ್ಥಾನ ತೊರೆದ ಬಳಿಕ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದರು. ಅವರು ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎಂಬ ಮಾತುಗಳೂ ಕೇಳಿಬಂದಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ‘ಪ್ರಭಾವಿ ನಾಯಕ ಸುವೇಂದು ಅಧಿಕಾರಿ ಅವರು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ನ (ಟಿಎಂಸಿ) ನಾಯಕತ್ವದ ವಿರುದ್ಧ ಮತ್ತೆ ಮುನಿಸಿಕೊಂಡಿದ್ದಾರೆ’ ಎಂದು ಅವರ ಆಪ್ತರು ಹೇಳಿದ್ದಾರೆ.</p>.<p>‘ಪಕ್ಷದ ನಾಯಕತ್ವದ ವಿರುದ್ಧ ಅಸಮಾಧಾನಗೊಂಡು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸುವೇಂದು ಅವರ ಮನವೊಲಿಸಲಾಗಿದ್ದು ಅವರು ಪಕ್ಷದಲ್ಲೇ ಮುಂದುವರಿಯಲಿದ್ದಾರೆ’ ಎಂದು ಟಿಎಂಸಿ ಸಂಸದ ಸೌಗತಾ ರಾಯ್ ಬುಧವಾರ ತಿಳಿಸಿದ್ದರು.</p>.<p>ಸೌಗತಾ ರಾಯ್, ಅಭಿಷೇಕ್ ಮುಖರ್ಜಿ, ಸುದೀಪ್ ಬಂಡೋಪಾಧ್ಯಾಯ ಮತ್ತು ಪ್ರಶಾಂತ್ ಕಿಶೋರ್ ಅವರನ್ನೊಳಗೊಂಡ ತಂಡವು ಮಂಗಳವಾರ ರಾತ್ರಿ ಸುವೇಂದು ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿತ್ತು.</p>.<p>‘ಪಕ್ಷದೊಳಗೆ ತಲೆದೋರಿದ್ದ ಬಿಕ್ಕಟ್ಟು ಶಮನವಾಗಿದೆ. ಸುವೇಂದು, ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ಶ್ರಮಿಸಲಿದ್ದಾರೆ. ಕೆಲವರು ಪಕ್ಷ ಒಡೆಯುವ ಕೆಲಸಕ್ಕೆ ಮುಂದಾಗಿದ್ದು ಅವರ ಕಾರ್ಯ ಫಲಿಸುವುದಿಲ್ಲ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಉತ್ತರ ನೀಡುತ್ತೇವೆ’ ಎಂದು ರಾಯ್ ಹೇಳಿದ್ದರು.</p>.<p>‘ಮಂಗಳವಾರ ನಡೆದ ರಹಸ್ಯ ಸಭೆಯ ಮಾಹಿತಿಗಳನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿರುವುದು ಹಾಗೂ ತಮ್ಮ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡದಿರುವುದರಿಂದ ಸುವೇಂದು ಮತ್ತೆ ಬೇಸರಗೊಂಡಿದ್ದಾರೆ’ ಎಂದು ಹೇಳಲಾಗಿದೆ.</p>.<p>2011ರಲ್ಲಿ ಮಮತಾ ಬ್ಯಾನರ್ಜಿ ಅವರು ಅಧಿಕಾರಕ್ಕೇರಲು ಕಾರಣವಾಗಿದ್ದ ‘ನಂದಿ ಗ್ರಾಮ ಚಳವಳಿಯ’ ಪ್ರಮುಖ ನಾಯಕರಾಗಿದ್ದ ಸುವೇಂದು, ಸಚಿವ ಸ್ಥಾನ ತೊರೆದ ಬಳಿಕ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದರು. ಅವರು ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎಂಬ ಮಾತುಗಳೂ ಕೇಳಿಬಂದಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>