ನವದೆಹಲಿ: ಕೋವಿಡ್ ಪರಿಸ್ಥಿತಿ ಕುರಿತು ಚರ್ಚಿಸಲು ತುರ್ತು ಸಂಸತ್ ಅಧಿವೇಶನವನ್ನು ಕರೆಯುವಂತೆ ಲೋಕಸಭೆಯಲ್ಲಿನ ಕಾಂಗ್ರೆಸ್ ಪಕ್ಷದ ಮುಖಂಡ ಅಧೀರ್ ರಂಜನ್ ಚೌಧರಿ ಅವರು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೆ ಪತ್ರ ಬರೆದಿದ್ದಾರೆ.
ಕೊರೊನಾ ಬಿಕ್ಕಟ್ಟಿನಿಂದ ಬಳಲುತ್ತಿರುವ ಸಾರ್ವಜನಿಕರಿಗೆ ಪರಿಹಾರ ಒದಗಿಸುವ ಮಾರ್ಗಗಳನ್ನು ಕಂಡುಕೊಳ್ಳಲು ಸಂಸತ್ ಅಧಿವೇಶನ ಕರೆಯುವುದು ಅಗತ್ಯ ಎಂದು ಚೌಧರಿ ಪತ್ರದಲ್ಲಿ ತಿಳಿಸಿದ್ದಾರೆ.
‘ಕೊರೊನಾ ಸಮಸ್ಯೆಯನ್ನು ನಿಭಾಯಿಸಲು ರಾಷ್ಟ್ರೀಯ ಪರಿಹಾರವನ್ನು ಕಂಡುಕೊಳ್ಳುವ ಅವಶ್ಯಕತೆಯಿದೆ’ ಎಂದೂ ಅವರು ಹೇಳಿದರು.