ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲವ್‌ ಜಿಹಾದ್‌ ವಿರುದ್ಧ ಕಾನೂನು ತರಲಾಗುವುದು: ಯೋಗಿ ಆದಿತ್ಯನಾಥ್‌

Last Updated 31 ಅಕ್ಟೋಬರ್ 2020, 15:39 IST
ಅಕ್ಷರ ಗಾತ್ರ

ಜಾನುಪುರ/ದಿಯೊರಿಯಾ (ಉತ್ತರ ಪ್ರದೇಶ): ಲವ್‌ ಜಿಹಾದ್‌ ತಡೆಯಲು ಉತ್ತರ ಪ್ರದೇಶ ಕಾನೂನು ಜಾರಿಗೆ ತರುತ್ತದೆ. ನಮ್ಮ ಹೆಣ್ಣುಮಕ್ಕಳನ್ನು ಗೌರವಿಸದೇ ಇರುವವರಿಗೆ 'ರಾಮ ನಾಮ ಸತ್ಯ ಹೈ' ಎನ್ನುವ ಚರಣಗೀತೆ ಹಾಡಲಾಗುವುದು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಎಚ್ಚರಿಕೆ ನೀಡಿದ್ದಾರೆ.

'ವಿವಾಹದ ಏಕೈಕ ಉದ್ದೇಶಕ್ಕಾಗಿ ಮಾಡಲಾಗುವ ಮತಾಂತರ ಮಾನ್ಯವಲ್ಲ,' ಎಂಬ ಅಲಹಾಬಾದ್ ಹೈಕೋರ್ಟ್ ತೀರ್ಪು ಸ್ವಾಗತಿಸಿದ ಸಿಎಂ ಯೋಗಿ ಆದಿತ್ಯನಾಥ್‌, 'ಲವ್ ಜಿಹಾದ್'ನಲ್ಲಿ ಭಾಗಿಯಾಗಿರುವವರ ಚಿತ್ರಗಳ ಪೋಸ್ಟರ್‌ಗಳನ್ನು ಸಮಾಜದಲ್ಲಿ ಹಾಕಲಾಗುವುದು,' ಎಂದು ಎಚ್ಚರಿಕೆಯನ್ನೂ ನೀಡಿದರು.

'ಲವ್‌ ಜಿಹಾದ್‌ ವಿರುದ್ಧ ನಾವು ಪರಿಣಾಮಕಾರಿ ಕಾನೂನನ್ನು ತರುತ್ತೇವೆ. ತಮ್ಮ ನಿಜವಾದ ಹೆಸರುಗಳು ಮತ್ತು ಗುರುತು ಮರೆಮಾಚಿ ನಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳ ಗೌರವ ಮತ್ತು ಘನತೆಯೊಂದಿಗೆ ಆಟವಾಡುವವರಿಗೆ ಇದು ನನ್ನ ಎಚ್ಚರಿಕೆ. ಅವರು ತಮ್ಮನ್ನು ತಿದ್ದಿಕೊಳ್ಳದೇ ಹೋದರೆ, ಅವರಿಗೆ ‘ರಾಮ್ ನಾಮ್ ಸತ್ಯ ಹೇ’ ಚರಣಗೀತೆ ಹಾಡಲಾಗುತ್ತದೆ ಎಂದು ಎಚ್ಚರಿಸಿದರು.

ಮಲ್ಹಾನಿ ಮತ್ತು ದಿಯೊರಿಯಾ ಕ್ಷೇತ್ರಗಳ ಉಪಚುನಾವಣೆ ಪ್ರಚಾರದಲ್ಲಿ ತೊಡಗಿದ್ದ ಅವರು, ಭಾಷಣದ ವೇಳೆ ಈ ವಿಚಾರ ಪ್ರಸ್ತಾಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT