<p><strong>ನವದೆಹಲಿ:</strong> ಭಾರತೀಯ ಸಶಸ್ತ್ರಪಡೆಗಳು ಅತ್ಯಂತ ಸಂಕೀರ್ಣ ಮತ್ತು ಅನಿಶ್ಚಿತ ವಾತಾವರಣದಲ್ಲಿ ಕಾರ್ಯನಿರ್ವಹಿಸುತ್ತಿವೆ. ಇಂಥ ಪರಿಸ್ಥಿತಿಯಲ್ಲಿ ನಮ್ಮ ರಾಷ್ಟ್ರವನ್ನು ರಕ್ಷಿಸಿಕೊಳ್ಳಬೇಕಾದರೆ ನಮಗೆ ಬಲವಾದ ಸಶಸ್ತ್ರ ಪಡೆಗಳ ಅಗತ್ಯವಿದೆ‘ ಎಂದು ರಕ್ಷಣಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅಭಿಪ್ರಾಯಪಟ್ಟರು.</p>.<p>ರಕ್ಷಣಾ ಮತ್ತು ಮಿಲಿಟರಿ ವಿಷಯಗಳ ಕುರಿತಾದ ಪೋರ್ಟಲ್ ‘ಭರತ್ಶಕ್ತಿ.ಇನ್‘ ಐದನೇ ವಾರ್ಷಿಕ ಸಮಾವೇಶದ ಉದ್ಘಾಟನಾ ಅಧಿವೇಶನದಲ್ಲಿ ಅವರು ಮಾತನಾಡಿದರು.</p>.<p>‘ದೇಶದಲ್ಲಿ ಶಾಂತಿ ಕಾಪಾಡುವುದಕ್ಕಾಗಿ ಸೇನೆಯ ಸಾಮರ್ಥ್ಯವನ್ನು ಹೆಚ್ಚಿಸಬೇಕು. ಅದಕ್ಕಾಗಿ ಮಿಲಿಟರಿ ಶಕ್ತಿ ಬಲಗೊಳ್ಳಬೇಕು. ಇಲ್ಲದಿದ್ದರೆ, ನಮ್ಮ ವಿರೋಧಿಗಳು, ಇದರ ಲಾಭವನ್ನು ಪಡೆಯಬಹುದು‘ ಎಂದು ಅವರು ಹೇಳಿದರು.</p>.<p>‘ಪ್ರಪಂಚದ ಪ್ರತಿ ವಲಯದಲ್ಲಿ ಸಣ್ಣದೋ, ದೊಡ್ಡದೋ ಯುದ್ಧಗಳು ನಡೆಯುತ್ತಿರುತ್ತವೆ. ಹಾಗಾಗಿ, ನಮ್ಮನ್ನು ನಾವು ರಕ್ಷಿಸಿಕೊಳ್ಳಲು, ನಮ್ಮ ದೇಶವನ್ನು ರಕ್ಷಿಸಲು, ದೇಶದ ಜನರು, ಸಮಗ್ರತೆಯನ್ನು ಕಾಪಾಡಲು ನಮ್ಮ ಸಶಸ್ತ್ರಪಡೆಯನ್ನು ಬಲವರ್ಧಿಸಬೇಕು‘ ಎಂದು ಅಭಿಪ್ರಾಯಪಟ್ಟರು.</p>.<p>‘ಶಸ್ತ್ರಾಸ್ತ್ರಗಳು ಬೇಕಾಗಿರುವುದು ಯುದ್ಧ ಮಾಡುವುದಕ್ಕಷ್ಟೇ ಅಲ್ಲ. ನಮ್ಮ ದೇಶದಲ್ಲಿ ಶಾಂತಿ ಕಾಪಾಡುವುದಕ್ಕಾಗಿ ನಮ್ಮ ಸಾಮರ್ಥ್ಯ ಹೆಚ್ಚಿಸಿಕೊಳ್ಳಲು ಶಸ್ತ್ರಾಸ್ತ್ರಗಳ ಅಗತ್ಯವಿದೆ‘ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಭಾರತೀಯ ಸಶಸ್ತ್ರಪಡೆಗಳು ಅತ್ಯಂತ ಸಂಕೀರ್ಣ ಮತ್ತು ಅನಿಶ್ಚಿತ ವಾತಾವರಣದಲ್ಲಿ ಕಾರ್ಯನಿರ್ವಹಿಸುತ್ತಿವೆ. ಇಂಥ ಪರಿಸ್ಥಿತಿಯಲ್ಲಿ ನಮ್ಮ ರಾಷ್ಟ್ರವನ್ನು ರಕ್ಷಿಸಿಕೊಳ್ಳಬೇಕಾದರೆ ನಮಗೆ ಬಲವಾದ ಸಶಸ್ತ್ರ ಪಡೆಗಳ ಅಗತ್ಯವಿದೆ‘ ಎಂದು ರಕ್ಷಣಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅಭಿಪ್ರಾಯಪಟ್ಟರು.</p>.<p>ರಕ್ಷಣಾ ಮತ್ತು ಮಿಲಿಟರಿ ವಿಷಯಗಳ ಕುರಿತಾದ ಪೋರ್ಟಲ್ ‘ಭರತ್ಶಕ್ತಿ.ಇನ್‘ ಐದನೇ ವಾರ್ಷಿಕ ಸಮಾವೇಶದ ಉದ್ಘಾಟನಾ ಅಧಿವೇಶನದಲ್ಲಿ ಅವರು ಮಾತನಾಡಿದರು.</p>.<p>‘ದೇಶದಲ್ಲಿ ಶಾಂತಿ ಕಾಪಾಡುವುದಕ್ಕಾಗಿ ಸೇನೆಯ ಸಾಮರ್ಥ್ಯವನ್ನು ಹೆಚ್ಚಿಸಬೇಕು. ಅದಕ್ಕಾಗಿ ಮಿಲಿಟರಿ ಶಕ್ತಿ ಬಲಗೊಳ್ಳಬೇಕು. ಇಲ್ಲದಿದ್ದರೆ, ನಮ್ಮ ವಿರೋಧಿಗಳು, ಇದರ ಲಾಭವನ್ನು ಪಡೆಯಬಹುದು‘ ಎಂದು ಅವರು ಹೇಳಿದರು.</p>.<p>‘ಪ್ರಪಂಚದ ಪ್ರತಿ ವಲಯದಲ್ಲಿ ಸಣ್ಣದೋ, ದೊಡ್ಡದೋ ಯುದ್ಧಗಳು ನಡೆಯುತ್ತಿರುತ್ತವೆ. ಹಾಗಾಗಿ, ನಮ್ಮನ್ನು ನಾವು ರಕ್ಷಿಸಿಕೊಳ್ಳಲು, ನಮ್ಮ ದೇಶವನ್ನು ರಕ್ಷಿಸಲು, ದೇಶದ ಜನರು, ಸಮಗ್ರತೆಯನ್ನು ಕಾಪಾಡಲು ನಮ್ಮ ಸಶಸ್ತ್ರಪಡೆಯನ್ನು ಬಲವರ್ಧಿಸಬೇಕು‘ ಎಂದು ಅಭಿಪ್ರಾಯಪಟ್ಟರು.</p>.<p>‘ಶಸ್ತ್ರಾಸ್ತ್ರಗಳು ಬೇಕಾಗಿರುವುದು ಯುದ್ಧ ಮಾಡುವುದಕ್ಕಷ್ಟೇ ಅಲ್ಲ. ನಮ್ಮ ದೇಶದಲ್ಲಿ ಶಾಂತಿ ಕಾಪಾಡುವುದಕ್ಕಾಗಿ ನಮ್ಮ ಸಾಮರ್ಥ್ಯ ಹೆಚ್ಚಿಸಿಕೊಳ್ಳಲು ಶಸ್ತ್ರಾಸ್ತ್ರಗಳ ಅಗತ್ಯವಿದೆ‘ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>