ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ ಸರ್ಕಾರ-ಆಮ್‌ ಆದ್ಮಿ ಸಮರ: 2 ದಿನಗಳ ನಂತರ, ಇಂದು ದೆಹಲಿ ಬಜೆಟ್ ಮಂಡನೆ

Last Updated 22 ಮಾರ್ಚ್ 2023, 4:35 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ಬಜೆಟ್‌ಗೆ ಸಂಬಂಧಿಸಿದ ಕೇಂದ್ರ ಸರ್ಕಾರ ಮತ್ತು ಆಮ್ ಆದ್ಮಿ ಪಕ್ಷದ ನಡುವಿನ ತಿಕ್ಕಾಟ ಅಂತ್ಯಗೊಂಡಿದ್ದು, ಇಂದು ಬಜೆಟ್‌ ಮಂಡನೆಯಾಗಲಿದೆ.

ಬಜೆಟ್‌ನಲ್ಲಿನ ಮೂಲಸೌಕರ್ಯ, ಜಾಹೀರಾತು ಮತ್ತು ಕೆಲವು ಹಂಚಿಕೆಗಳಿಗೆ ಆರಂಭದಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದ ಕೇಂದ್ರ ಗೃಹ ಸಚಿವಾಲಯ ದೆಹಲಿ ಬಜೆಟ್‌ಗೆ ಅನುಮೋದನೆ ನೀಡಿದೆ.

ಆಮ್ ಆದ್ಮಿ ಪಕ್ಷದ ಸರ್ಕಾರದ ಸ್ಪಷ್ಟೀಕರಣದ ನಂತರ ಮಂಗಳವಾರ ಸಂಜೆ ದೆಹಲಿ ಬಜೆಟ್ ಅನ್ನು ಕೇಂದ್ರವು ಅಂಗೀಕರಿಸಿ, ವಿಧಾನಸಭೆಯಲ್ಲಿ ಅದರ ಮಂಡನೆಗೆ ದಾರಿ ಮಾಡಿಕೊಟ್ಟಿತು. ಮಂಗಳವಾರ ವಿಧಾನಸಭೆಯಲ್ಲಿ ಬಜೆಟ್ ಮಂಡಿಸಲು ನಿರ್ಧರಿಸಲಾಗಿತ್ತು. ಆದರೆ ಕೇಂದ್ರವು ಅರವಿಂದ್ ಕೇಜ್ರಿವಾಲ್ ಸರ್ಕಾರಕ್ಕೆ ಲೆಫ್ಟಿನೆಂಟ್ ಗವರ್ನರ್ ಅವರ ಕಳವಳಗಳನ್ನು ಪರಿಹರಿಸಿದ ನಂತರ ಬಜೆಟ್ ಅನ್ನು ಮರುಸಲ್ಲಿಸುವಂತೆ ಕೇಳಿಕೊಂಡಿತ್ತು.

ಹಣಕಾಸು ಸಚಿವ ಕೈಲಾಶ್ ಗೆಹ್ಲೋತ್‌ ಅವರು ಇಂದು ದೆಹಲಿ ವಿಧಾನಸಭೆಯಲ್ಲಿ ಬಜೆಟ್ ಮಂಡಿಸಲಿದ್ದು, ಗಾತ್ರ ₹ 78,800 ಕೋಟಿ. ₹ 22,000 ಕೋಟಿ ಮೂಲಸೌಕರ್ಯ ಮತ್ತು ₹ 550 ಕೋಟಿ ಜಾಹೀರಾತುಗಳಿಗೆ ಮೀಸಲಿಡಲಾಗಿದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT