ದೆಹಲಿಯ ಎಎಪಿ ಸರ್ಕಾರ ಸೆಪ್ಟೆಂಬರ್ 1ರಂದು ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚಿಸಿ ಬಹುಮತ ಸಾಬೀತುಪಡಿಸಿತ್ತು. ಬಳಿಕ ಮಾತನಾಡಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ‘ಬಿಜೆಪಿಯ ಆಪರೇಷನ್ ಕಮಲ ವಿಫಲವಾಗಿದೆ ಎಂಬುದನ್ನು ತೋರಿಸಲು ವಿಶ್ವಾಸಮತವನ್ನು ಸಾಬೀತು ಮಾಡಲು ಮುಂದಾದೆವು. ಬಿಜೆಪಿಯ ತಂತ್ರಗಾರಿಕೆಯನ್ನು ಸೋಲಿಸಿದ್ದೇವೆ ಎಂಬುದನ್ನು ಸಾಬೀತುಮಾಡಿದ್ದೇವೆ’ ಎಂದು ಹೇಳಿದ್ದರು.