<p><strong>ನವದೆಹಲಿ:</strong>ರಾಜ್ಯಸಭೆಯಲ್ಲಿ ಅನುಮೋದನೆಗೊಂಡ ಮೂರು ಪ್ರಮುಖ ಕಾರ್ಮಿಕ ಸಂಹಿತೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.</p>.<p>‘ಬಡವರನ್ನು ಶೋಷಿಸುವುದು, ಸ್ನೇಹಿತರನ್ನು ಪೋಷಿಸುವುದು, ಇದು ಮೋದಿಯವರ ಆಡಳಿತ’ ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ‘ಇಲ್ಲಿವರೆಗೂ ರೈತರನ್ನು ಗುರಿಯಾಗಿಸಿದ್ದ ಕೇಂದ್ರ ಸರ್ಕಾರ, ಈಗ ಕಾರ್ಮಿಕರನ್ನು ಗುರಿಯಾಗಿಸುತ್ತಿದೆ’ ಎಂದು ರಾಹುಲ್ ಗಾಂಧಿ ದೂರಿದ್ದಾರೆ.</p>.<p>ಈ ಕುರಿತು ಟ್ವೀಟ್ ಮಾಡಿರುವ ಅವರು, ಕೇಂದ್ರ ಸರ್ಕಾರ ಇತ್ತೀಚೆಗೆ ಕೈಗೊಂಡಿರುವ ಕ್ರಮಗಳನ್ನು ಕಟುವಾಗಿ ಟೀಕಿಸಿದ್ದಾರೆ.</p>.<p>ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಅವರು ಕೇಂದ್ರ ಸರ್ಕಾರದ ಆದ್ಯತೆಯನ್ನು ಪ್ರಶ್ನಿಸುವ ಜತೆಗೆ, ‘ಇಂಥ ಸಂಕಷ್ಟದ ಸಮಯದಲ್ಲಿ ಸರ್ಕಾರ ಜನರ ಜೀವನದ ರಕ್ಷಣೆ ಬಗ್ಗೆ ಏನಾದರೂ ಕ್ರಮಗಳನ್ನು ಕೈಗೊಂಡಿದೆಯೇ’ ಎಂದು ಕೇಳಿದ್ದಾರೆ.</p>.<p>ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಈ ಬಿಜೆಪಿ ಸರ್ಕಾರದ ಆದ್ಯತೆಯನ್ನು ನೋಡಿ, ನೌಕರರನ್ನು ಕೆಲಸದಿಂದ ಸುಲಭವಾಗಿ ತೆಗೆಯುವಂತಹ ಮಸೂದೆಯನ್ನು ಜಾರಿಗೆ ತಂದಿದೆ’ ಎಂದು ಆರೋಪಿಸಿದ್ದಾರೆ. ‘ನೌಕರರ ವಿರುದ್ಧ ದೌರ್ಜನ್ಯವೆಸಗಲು ಸುಲಭ ಮಾಡಿಕೊಟ್ಟಿದೆ ಸರ್ಕಾರ’ ಎಂದು ದೂರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong>ರಾಜ್ಯಸಭೆಯಲ್ಲಿ ಅನುಮೋದನೆಗೊಂಡ ಮೂರು ಪ್ರಮುಖ ಕಾರ್ಮಿಕ ಸಂಹಿತೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.</p>.<p>‘ಬಡವರನ್ನು ಶೋಷಿಸುವುದು, ಸ್ನೇಹಿತರನ್ನು ಪೋಷಿಸುವುದು, ಇದು ಮೋದಿಯವರ ಆಡಳಿತ’ ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ‘ಇಲ್ಲಿವರೆಗೂ ರೈತರನ್ನು ಗುರಿಯಾಗಿಸಿದ್ದ ಕೇಂದ್ರ ಸರ್ಕಾರ, ಈಗ ಕಾರ್ಮಿಕರನ್ನು ಗುರಿಯಾಗಿಸುತ್ತಿದೆ’ ಎಂದು ರಾಹುಲ್ ಗಾಂಧಿ ದೂರಿದ್ದಾರೆ.</p>.<p>ಈ ಕುರಿತು ಟ್ವೀಟ್ ಮಾಡಿರುವ ಅವರು, ಕೇಂದ್ರ ಸರ್ಕಾರ ಇತ್ತೀಚೆಗೆ ಕೈಗೊಂಡಿರುವ ಕ್ರಮಗಳನ್ನು ಕಟುವಾಗಿ ಟೀಕಿಸಿದ್ದಾರೆ.</p>.<p>ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಅವರು ಕೇಂದ್ರ ಸರ್ಕಾರದ ಆದ್ಯತೆಯನ್ನು ಪ್ರಶ್ನಿಸುವ ಜತೆಗೆ, ‘ಇಂಥ ಸಂಕಷ್ಟದ ಸಮಯದಲ್ಲಿ ಸರ್ಕಾರ ಜನರ ಜೀವನದ ರಕ್ಷಣೆ ಬಗ್ಗೆ ಏನಾದರೂ ಕ್ರಮಗಳನ್ನು ಕೈಗೊಂಡಿದೆಯೇ’ ಎಂದು ಕೇಳಿದ್ದಾರೆ.</p>.<p>ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಈ ಬಿಜೆಪಿ ಸರ್ಕಾರದ ಆದ್ಯತೆಯನ್ನು ನೋಡಿ, ನೌಕರರನ್ನು ಕೆಲಸದಿಂದ ಸುಲಭವಾಗಿ ತೆಗೆಯುವಂತಹ ಮಸೂದೆಯನ್ನು ಜಾರಿಗೆ ತಂದಿದೆ’ ಎಂದು ಆರೋಪಿಸಿದ್ದಾರೆ. ‘ನೌಕರರ ವಿರುದ್ಧ ದೌರ್ಜನ್ಯವೆಸಗಲು ಸುಲಭ ಮಾಡಿಕೊಟ್ಟಿದೆ ಸರ್ಕಾರ’ ಎಂದು ದೂರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>