‘ಕೇರಳ ಪಿರಾವಿ ದಿನದ (ಕೇರಳ ದಿನ) ಹಿನ್ನೆಲೆಯಲ್ಲಿ ನಾಳೆ(ನ.1)ಯಿಂದ ಬೀಚ್ ಪ್ರವಾಸೋದ್ಯಮಕ್ಕೆ ಸರ್ಕಾರವು ಹಸಿರು ನಿಶಾನೆ ತೋರಿದೆ. ಇದು ರಜೆ ಕಾಲವಾಗಿರುವುದರಿಂದ ಪ್ರವಾಸಿಗರೂ ಹೆಚ್ಚಿನ ಸಂಖ್ಯೆಯಲ್ಲಿ ರಾಜ್ಯಕ್ಕೆ ಭೇಟಿ ನೀಡಲಿದ್ದು, ಇದರಿಂದ ಹೆಚ್ಚಿನ ಆದಾಯವೂ ಹರಿದು ಬರುವ ನಿರೀಕ್ಷೆ ಇದೆ’ ಎಂದು ಪ್ರವಾಸೋದ್ಯಮ ಇಲಾಖೆಯ ಮೂಲಗಳು ತಿಳಿಸಿವೆ.