‘ನಾನು ನಿನ್ನೆ (ಶನಿವಾರ) ರಾಜೀನಾಮೆ ನೀಡಿದ್ದೇನೆ. ನಮ್ಮ ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ ನನ್ನ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಎಂಸಿಡಿ ಚುನಾವಣೆಯಲ್ಲಿನ ಸೋಲಿನ ನೈತಿಕ ಹೊಣೆ ಹೊತ್ತುಕೊಂಡಿದ್ದೇನೆ. ನಾವು ಎಂಸಿಡಿಯಲ್ಲಿ ಹೆಚ್ಚಿನ ಸ್ಥಾನಗಳನ್ನು ನಿರೀಕ್ಷಿಸಿದ್ದೆವು. ಆದರೆ, ಅದು ಸಾಧ್ಯವಾಗಲಿಲ್ಲ. ಹೀಗಾಗಿ ನಾನು ಈ ನಿರ್ಧಾರ ಕೈಗೊಳ್ಳಬೇಕಾಯಿತು‘ ಎಂದು ಆದೇಶ್ ತಿಳಿಸಿದರು.