ಗುರುವಾರ, 1 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ನನ್ನ ವರ್ಚಸ್ಸು ಹಾಳುಗೆಡವಲು ಸುಪಾರಿ ನೀಡಲಾಗಿದೆ' ಎಂದ ಮೋದಿಗೆ ಸಿಬಲ್‌ ಸವಾಲು

‘ಹೆಸರು ಬಹಿರಗಪಡಿಸಿ‘
Last Updated 2 ಏಪ್ರಿಲ್ 2023, 11:15 IST
ಅಕ್ಷರ ಗಾತ್ರ

ನವದೆಹಲಿ: ‘ನನ್ನ ವರ್ಚಸ್ಸನ್ನು ಹಾಳುಗೆಡವಲು ಕೆಲವರು ದೇಶದ ಒಳಗೆ ಮತ್ತು ಹೊರಗಿನ ಜನರೊಂದಿಗೆ ಶಾಮೀಲಾಗಿದ್ದಾರೆ’ ಎಂಬ ಪ್ರಧಾನಿ ನರೇಂದ್ರ ಮೋದಿ ಆರೋಪಕ್ಕೆ ಪ್ರತಿಕ್ರಿಯಿಸಿರುವ ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್, ಅವರ ಹೆಸರುಗಳನ್ನು ಬಹಿರಂಗ‍ಪಡಿಸಿ, ವಿಚಾರಣೆಗೆ ಒಳಪಡಿಸೋಣ ಎಂದು ಹೇಳಿದರು.

ಭೋಪಾಲ್‌ನ ರಾಣಿ ಕಮಲಾಪತಿ ರೈಲ್ವೆ ನಿಲ್ದಾಣದಲ್ಲಿ ಭೋಪಾಲ್– ದೆಹಲಿ ಮಾರ್ಗದ ವಂದೇಭಾರತ್ ಎಕ್ಸ್‌ಪ್ರೆಸ್‌ ರೈಲು ಸಂಚಾರ ಉದ್ಘಾಟಿಸಿದ ಬಳಿಕ ಮಾತನಾಡಿದ್ದ ಮೋದಿ, ‘ನನ್ನ ವರ್ಚಸ್ಸು ಹಾಳುಗೆಡವಲು ಕೆಲವರಿಗೆ ಸುಪಾರಿಯನ್ನೂ ನೀಡಲಾಗಿದೆ’ ಎಂದು ಹೇಳಿಕೆ ನೀಡಿದ್ದರು.

‘ಕೆಲವರು ದೇಶದ ಒಳಗೆ ಮತ್ತು ಹೊರಗೆ ಮೋದಿ ಅವರ ಸಮಾಧಿ ಅಗೆಯಲು ಹೊರಟಿದ್ದಾರೆ. ದಯವಿಟ್ಟು ಅವರ ಹೆಸರುಗಳನ್ನು ತಿಳಿಸಬೇಕು. ವ್ಯಕ್ತಿಗಳು, ಸಂಸ್ಥೆಗಳು ಅಥವಾ ದೇಶಗಳು ಇರಬಹುದು. ಇದು ರಹಸ್ಯವಾಗಿರಲು ಸಾಧ್ಯವಿಲ್ಲ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳೋಣ’ ಎಂದು ಸಿಬಲ್ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT