ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳ ಚಿನ್ನ ಸಾಗಣೆ: ಖರ್ಜೂರ ವಿತರಣೆ ಕುರಿತೂ ತನಿಖೆ

Last Updated 21 ಸೆಪ್ಟೆಂಬರ್ 2020, 2:15 IST
ಅಕ್ಷರ ಗಾತ್ರ

ತಿರುವನಂತಪುರ: ರಾಜತಾಂತ್ರಿಕ ಮಾರ್ಗದ ಮೂಲಕ ಚಿನ್ನ ಕಳ್ಳ ಸಾಗಣೆ ನಡೆಸಿರುವ ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾ ಸಂಸ್ಥೆಗಳು ಇದೀಗ ತಿರುವನಂತಪುರದ ಯುಎಇ ರಾಯಭಾರ ಕಚೇರಿ ವಿತರಿಸಿರುವ ಖರ್ಜೂರವನ್ನು ಪಡೆದುಕೊಂಡಿರುವ ಸಂಸ್ಥೆಗಳ ಮೇಲೂ ಕಣ್ಣಿಟ್ಟಿವೆ.

2017 ಮೇ ತಿಂಗಳಲ್ಲಿ ನಡೆದ ಕಾರ್ಯಕ್ರದಲ್ಲಿ ಯುಎಇ ಅಧ್ಯಕ್ಷ ಶೇಖ್‌ ಖಲೀಫಾ ಬಿನ್‌ ಝಯೇದ್‌ ಅಲ್‌ ನಹ್ಯಾನ್‌ ಅವರು ವಿಶೇಷ ಮಕ್ಕಳ ಶಾಲೆ, ಅನಾಥಾಶ್ರಮ ಸೇರಿದಂತೆ ವಿವಿಧ ಸಂಸ್ಥೆಗಳ ಸುಮಾರು 40 ಸಾವಿರ ಬಡ ಮಕ್ಕಳಿಗೆ ಉತ್ತಮ ಗುಣಮಟ್ಟದ ಖರ್ಜೂರ ವಿತರಿಸಿದ್ದರು. ಸುಮಾರು 18 ಸಾವಿರ ಕಿ.ಗ್ರಾಂ. ಖರ್ಜೂರವನ್ನು ವಿತರಿಸಲಾಗಿತ್ತು.

ಚಿನ್ನ ಸಾಗಣೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಸ್ವಪ್ನಾ ಸುರೇಶ್ ಅವರು ಆಗ ಯುಎಇ ರಾಯಭಾರ ಕಚೇರಿಯ ಸಿಬ್ಬಂದಿಯಾಗಿದ್ದರು ಮತ್ತು ಈ ಕಾರ್ಯಕ್ರಮ ಆಯೋಜನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಚಿನ್ನ ಸಾಗಣೆ ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾ ಸಂಸ್ಥೆಗಳು ಇದೀಗ ಖರ್ಜೂರ ವಿತರಣೆ ಕುರಿತೂ ಮಾಹಿತಿ ಕಲೆಹಾಕುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT