ಹಿಂದೂ ಮಹಾಸಾಗರದ ದ್ವೀಪರಾಷ್ಟ್ರಗಳಲ್ಲಿ ಚೀನಾವು ಭಾರಿ ಪ್ರಮಾಣದಲ್ಲಿ ಬಂಡವಾಳ ಹೂಡುವ ಮೂಲಕ, ತನ್ನ ಪ್ರಾಬಲ್ಯವನ್ನು ಹೆಚ್ಚಿಸಿಕೊಂಡಿತ್ತು. ಶ್ರೀಲಂಕಾದ ಹಂಬನ್ತೋಟಾದಲ್ಲಿ ಬಂದರು ಅಭಿವೃದ್ಧಿಪಡಿಸಿ, ಅದನ್ನು ಗುತ್ತಿಗೆ ಪಡೆದುಕೊಳ್ಳುವಲ್ಲಿ ಚೀನಾ ಯಶಸ್ವಿಯಾಗಿತ್ತು. ಇದು ಹಿಂದೂ ಮಹಾ
ಸಾಗರ ಪ್ರದೇಶದಲ್ಲಿ ಭಾರತದ ಪ್ರಾಬಲ್ಯಕ್ಕೆ ಕೊಟ್ಟ ಹೊಡೆತ ಎಂದೇ ಪರಿಗಣಿಸಲಾಗಿತ್ತು. ಈಗ ಭಾರತವು ಸಮುದ್ರಯಾನಕ್ಕೆ ಅತ್ಯಗತ್ಯವಾದ ವ್ಯವಸ್ಥೆಗಳನ್ನು ಮಾಲ್ಡೀವ್ಸ್ ಮತ್ತು ಶ್ರೀಲಂಕಾದಲ್ಲಿ ಸ್ಥಾಪನೆಗೆ ಮುಂದಾಗುವ ಮೂಲಕ ಪ್ರಾಬಲ್ಯವನ್ನು ಮರುಸ್ಥಾಪಿಸಿದೆ. ಆ ಮೂಲಕ ಚೀನಾಕ್ಕೆ ಸೆಡ್ಡು ಹೊಡೆದಿದೆಎಂದು ವಿಶ್ಲೇಷಿಸಲಾಗಿದೆ.