<p><strong>ಕೋಲ್ಕತ್ತ:</strong> ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಅಲ್ಪ ಮತಗಳ ಅಂತರದಿಂದ ಸೋತ ವಿಧಾನಸಭಾ ಕ್ಷೇತ್ರಗಳ ಮರು ಮತಎಣಿಕೆ ಕೋರಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸುವ ಆಯ್ಕೆಯನ್ನು ಬಿಜೆಪಿ ಪರಿಶೀಲಿಸುತ್ತಿದೆ.</p>.<p><strong>ಇದನ್ನೂ ಓದಿ: </strong><a href="https://www.prajavani.net/india-news/calcutta-high-court-defers-mamata-banerjee-plea-challenging-nandigram-poll-result-to-june-839948.html" target="_blank">ನಂದಿಗ್ರಾಮ ಫಲಿತಾಂಶಕ್ಕೆ ತಕರಾರು: ಮಮತಾ ಅರ್ಜಿ ವಿಚಾರಣೆ ಜೂನ್ 24ಕ್ಕೆ ಮುಂದೂಡಿಕೆ</a></p>.<p>ಈ ಕುರಿತು ಶನಿವಾರ ಮುರ್ಷಿದಾಬಾದ್ನಲ್ಲಿ ಮಾತನಾಡಿರುವ ಪಶ್ಚಿಮ ಬಂಗಾಳದ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ‘ಮರು ಮತಎಣಿಕೆ ಕೋರಿ ಮನವಿ ಸಲ್ಲಿಸುವ ಕುರಿತು ನಮ್ಮ ವಕೀಲರೊಂದಿಗೆ ಚರ್ಚಿಸುತ್ತಿದ್ದೇವೆ,‘ ಎಂದು ಹೇಳಿದ್ದಾರೆ.</p>.<p>ನಂದಿಗ್ರಾಮ ಸೇರಿದಂತೆ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಮರು ಮತಎಣಿಕೆಗೆ ಒತ್ತಾಯಿಸಿ ತೃಣಮೂಲ ಕಾಂಗ್ರೆಸ್ ಕೋಲ್ಕತ್ತ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿರುವ ಬೆನ್ನಲ್ಲೇ ಬಿಜೆಪಿಯು ತಾನೂ ಈ ಆಲೋಚನೆ ನಡೆಸಿದೆ.</p>.<p>ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದಲ್ಲಿ ಸ್ವತಃ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೇ ಬಿಜೆಪಿಯ ಸುವೇಂದು ಅಧಿಕಾರಿ ಅವರ ವಿರುದ್ಧ ಕೇವಲ 1956ರ ಮತಗಳ ಅಂತರದಲ್ಲಿ ಸೋಲುಂಡಿದ್ದರು.</p>.<p>ನಂದಿಗ್ರಾಮ ಮಾತ್ರವಲ್ಲದೇ ಮೊಯ್ನಾ, ಬೊಂಗಾಂವ್ ದಕ್ಷಿಣ, ಗೋಘಾಟ್ ಮತ್ತು ಬಲರಾಂಪುರ್ ವಿಧಾನಸಭಾ ಕ್ಷೇತ್ರಗಳ ಟಿಎಂಸಿ ಅಭ್ಯರ್ಥಿಗಳು ಮರು ಮತಎಣಿಕೆ ಕೋರಿ ಹೈಕೋರ್ಟ್ನಲ್ಲಿ ಚುನಾವಣಾ ತಕರಾರು ಅರ್ಜಿಗಳನ್ನು ಸಲ್ಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಅಲ್ಪ ಮತಗಳ ಅಂತರದಿಂದ ಸೋತ ವಿಧಾನಸಭಾ ಕ್ಷೇತ್ರಗಳ ಮರು ಮತಎಣಿಕೆ ಕೋರಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸುವ ಆಯ್ಕೆಯನ್ನು ಬಿಜೆಪಿ ಪರಿಶೀಲಿಸುತ್ತಿದೆ.</p>.<p><strong>ಇದನ್ನೂ ಓದಿ: </strong><a href="https://www.prajavani.net/india-news/calcutta-high-court-defers-mamata-banerjee-plea-challenging-nandigram-poll-result-to-june-839948.html" target="_blank">ನಂದಿಗ್ರಾಮ ಫಲಿತಾಂಶಕ್ಕೆ ತಕರಾರು: ಮಮತಾ ಅರ್ಜಿ ವಿಚಾರಣೆ ಜೂನ್ 24ಕ್ಕೆ ಮುಂದೂಡಿಕೆ</a></p>.<p>ಈ ಕುರಿತು ಶನಿವಾರ ಮುರ್ಷಿದಾಬಾದ್ನಲ್ಲಿ ಮಾತನಾಡಿರುವ ಪಶ್ಚಿಮ ಬಂಗಾಳದ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ‘ಮರು ಮತಎಣಿಕೆ ಕೋರಿ ಮನವಿ ಸಲ್ಲಿಸುವ ಕುರಿತು ನಮ್ಮ ವಕೀಲರೊಂದಿಗೆ ಚರ್ಚಿಸುತ್ತಿದ್ದೇವೆ,‘ ಎಂದು ಹೇಳಿದ್ದಾರೆ.</p>.<p>ನಂದಿಗ್ರಾಮ ಸೇರಿದಂತೆ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಮರು ಮತಎಣಿಕೆಗೆ ಒತ್ತಾಯಿಸಿ ತೃಣಮೂಲ ಕಾಂಗ್ರೆಸ್ ಕೋಲ್ಕತ್ತ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿರುವ ಬೆನ್ನಲ್ಲೇ ಬಿಜೆಪಿಯು ತಾನೂ ಈ ಆಲೋಚನೆ ನಡೆಸಿದೆ.</p>.<p>ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದಲ್ಲಿ ಸ್ವತಃ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೇ ಬಿಜೆಪಿಯ ಸುವೇಂದು ಅಧಿಕಾರಿ ಅವರ ವಿರುದ್ಧ ಕೇವಲ 1956ರ ಮತಗಳ ಅಂತರದಲ್ಲಿ ಸೋಲುಂಡಿದ್ದರು.</p>.<p>ನಂದಿಗ್ರಾಮ ಮಾತ್ರವಲ್ಲದೇ ಮೊಯ್ನಾ, ಬೊಂಗಾಂವ್ ದಕ್ಷಿಣ, ಗೋಘಾಟ್ ಮತ್ತು ಬಲರಾಂಪುರ್ ವಿಧಾನಸಭಾ ಕ್ಷೇತ್ರಗಳ ಟಿಎಂಸಿ ಅಭ್ಯರ್ಥಿಗಳು ಮರು ಮತಎಣಿಕೆ ಕೋರಿ ಹೈಕೋರ್ಟ್ನಲ್ಲಿ ಚುನಾವಣಾ ತಕರಾರು ಅರ್ಜಿಗಳನ್ನು ಸಲ್ಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>