ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

10ನೇ ತರಗತಿ ದಲಿತ ವಿದ್ಯಾರ್ಥಿಗೆ ಥಳಿಸಿ ಕಾಲು ನೆಕ್ಕಿಸಿದ ಪ್ರಕರಣ: 7 ಮಂದಿ ಬಂಧನ

Last Updated 19 ಏಪ್ರಿಲ್ 2022, 5:54 IST
ಅಕ್ಷರ ಗಾತ್ರ

ರಾಯ್ ಬರೇಲಿ: 10ನೇ ತರಗತಿ ಓದುತ್ತಿರುವ ವಿದ್ಯಾರ್ಥಿಯನ್ನು ಥಳಿಸಿ ಕಾಲು ನೆಕ್ಕಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು 7 ಮಂದಿಯನ್ನು ಬಂಧಿಸಿದ್ದಾರೆ.

ದುಷ್ಕರ್ಮಿಗಳು ದಲಿತ ವಿದ್ಯಾರ್ಥಿಗೆ ಹಿಂಸೆ ನೀಡಿದ್ದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು.

ವಿಡಿಯೊ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ರಾಯ್ ಬರೇಲಿಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ದುಷ್ಕರ್ಮಿಗಳ ಪತ್ತೆ ಮತ್ತು ಕ್ರಮ ಜರುಗಿಸಲು ಐದು ತಂಡಗಳನ್ನು ರಚಿಸಿದ್ದರು.

ಪ್ರಕರಣದ ಪ್ರಮುಖ ಆರೋಪಿ ಬಾಲಕನಾಗಿದ್ದು, ಬಾಲಮಂದಿರಕ್ಕೆ ಕಳುಹಿಸಲಾಗಿದೆ. ಉಳಿದ 6 ಮಂದಿ ಆರೋಪಿಗಳನ್ನು ಅಭಿಷೇಕ್, ವಿಕಾಸ್ ಪಾಸಿ, ಮಹೇಂದ್ರ ಕುಮಾರ್, ಹೃತಿಕ್ ಸಿಂಗ್, ಅಮನ್ ಸಿಂಗ್ ಮತ್ತು ಯಶ್ ಪ್ರತಾಪ್ ಎಂದು ಗುರುತಿಸಲಾಗಿದ್ದು, ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅದೇ ಶಾಲೆಯಲ್ಲಿ ಓದಿದ್ದ ಹಳೆ ವಿದ್ಯಾರ್ಥಿಗಳ ಸುಲಿಗೆಗೆ ಸಹಕರಿಸದ ಕಾರಣ 10ನೇ ತರಗತಿಯ ದಲಿತ ಬಾಲಕನಿಗೆ ಚಿತ್ರಹಿಂಸೆ ನೀಡಿ ಅಮಾನವೀಯವಾಗಿ ನಡೆಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT