<p><strong>ಡೆಹ್ರಾಡೂನ್:</strong> ಇಂಗ್ಲೆಂಡ್ ವಿರುದ್ಧದ ಮೊದಲ ಟಿ–20 ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶೂನ್ಯಕ್ಕೆ ಔಟಾಗಿದನ್ನು ಉದಾಹರಣೆಯಾಗಿ ತೆಗೆದುಕೊಂಡಿರುವ ಉತ್ತರಾಖಂಡ ಪೊಲೀಸರು ವಾಹನ ಸವಾರರಿಗೆ ಏಕಾಗ್ರತೆಯ ಪಾಠ ಮಾಡಿದ್ದಾರೆ.</p>.<p>ಶುಕ್ರವಾರ ಭಾರತ ಮತ್ತು ಇಂಗ್ಲೆಂಡ್ ನಡುವೆ ಮೊದಲ ಟಿ–20 ಕ್ರಿಕೆಟ್ ಪಂದ್ಯ ನಡೆದಿತ್ತು. ಈ ಪಂದ್ಯದಲ್ಲಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಶೂನ್ಯಕ್ಕೆ ಔಟಾಗಿದ್ದರು. ಇದನ್ನು ಉದಾಹರಣೆಯಾಗಿ ತೆಗೆದುಕೊಂಡಿರುವ ಉತ್ತರಾಖಂಡ ಪೊಲೀಸರು ದ್ವಿಚಕ್ರ ವಾಹನ ಸವಾರರಿಗೆ ಜಾಗೃತಿಯ ಪಾಠ ಮಾಡಿದ್ದಾರೆ.</p>.<p>ಈ ಬಗ್ಗೆ ಟ್ವೀಟ್ ಮಾಡಿರುವ ಪೊಲೀಸರು, ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ದರಿಸಿದರೆ ಸಾಲದು, ಏಕಾಗ್ರತೆಯಿಂದ, ಜಾಗರೂಕರಾಗಿ ವಾಹನ ಚಲಾವಣೆ ಮಾಡಬೇಕು. ಇಲ್ಲವಾದಲ್ಲಿ ವಿರಾಟ್ ಕೊಹ್ಲಿಯಂತೆ ಶೂನ್ಯಕ್ಕೆ ಔಟ್ ಆಗಬೇಕಾಗುತ್ತದೆ ಎಂಬ ಟ್ವೀಟ್ ಮಾಡಿದ್ದಾರೆ.</p>.<p>ಕೊಹ್ಲಿ ಔಟ್ ಆಗಿ ನಿರ್ಗಮಿಸುತ್ತಿರುವ ಫೋಟೊವನ್ನು ಬಳಸಿ ಈ ಮೇಲಿನ ಸಾಲುಗಳನ್ನು ಟ್ವೀಟ್ ಮಾಡಲಾಗಿದೆ.</p>.<p>ಉತ್ತರಾಖಂಡ ಪೊಲೀಸರ ಈ ಟ್ವೀಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ನೆಟ್ಟಿಗರು ಪರ ಮತ್ತು ವಿರೋಧದ ಚರ್ಚೆಯಲ್ಲಿ ತೊಡಗಿದ್ದಾರೆ.</p>.<p>ನಿನ್ನೆ ನೆಡೆದ ಪಂದ್ಯದಲ್ಲಿ ಭಾರತ ಹೀನಾಯವಾಗಿ ಸೋಲು ಕಂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಡೆಹ್ರಾಡೂನ್:</strong> ಇಂಗ್ಲೆಂಡ್ ವಿರುದ್ಧದ ಮೊದಲ ಟಿ–20 ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶೂನ್ಯಕ್ಕೆ ಔಟಾಗಿದನ್ನು ಉದಾಹರಣೆಯಾಗಿ ತೆಗೆದುಕೊಂಡಿರುವ ಉತ್ತರಾಖಂಡ ಪೊಲೀಸರು ವಾಹನ ಸವಾರರಿಗೆ ಏಕಾಗ್ರತೆಯ ಪಾಠ ಮಾಡಿದ್ದಾರೆ.</p>.<p>ಶುಕ್ರವಾರ ಭಾರತ ಮತ್ತು ಇಂಗ್ಲೆಂಡ್ ನಡುವೆ ಮೊದಲ ಟಿ–20 ಕ್ರಿಕೆಟ್ ಪಂದ್ಯ ನಡೆದಿತ್ತು. ಈ ಪಂದ್ಯದಲ್ಲಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಶೂನ್ಯಕ್ಕೆ ಔಟಾಗಿದ್ದರು. ಇದನ್ನು ಉದಾಹರಣೆಯಾಗಿ ತೆಗೆದುಕೊಂಡಿರುವ ಉತ್ತರಾಖಂಡ ಪೊಲೀಸರು ದ್ವಿಚಕ್ರ ವಾಹನ ಸವಾರರಿಗೆ ಜಾಗೃತಿಯ ಪಾಠ ಮಾಡಿದ್ದಾರೆ.</p>.<p>ಈ ಬಗ್ಗೆ ಟ್ವೀಟ್ ಮಾಡಿರುವ ಪೊಲೀಸರು, ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ದರಿಸಿದರೆ ಸಾಲದು, ಏಕಾಗ್ರತೆಯಿಂದ, ಜಾಗರೂಕರಾಗಿ ವಾಹನ ಚಲಾವಣೆ ಮಾಡಬೇಕು. ಇಲ್ಲವಾದಲ್ಲಿ ವಿರಾಟ್ ಕೊಹ್ಲಿಯಂತೆ ಶೂನ್ಯಕ್ಕೆ ಔಟ್ ಆಗಬೇಕಾಗುತ್ತದೆ ಎಂಬ ಟ್ವೀಟ್ ಮಾಡಿದ್ದಾರೆ.</p>.<p>ಕೊಹ್ಲಿ ಔಟ್ ಆಗಿ ನಿರ್ಗಮಿಸುತ್ತಿರುವ ಫೋಟೊವನ್ನು ಬಳಸಿ ಈ ಮೇಲಿನ ಸಾಲುಗಳನ್ನು ಟ್ವೀಟ್ ಮಾಡಲಾಗಿದೆ.</p>.<p>ಉತ್ತರಾಖಂಡ ಪೊಲೀಸರ ಈ ಟ್ವೀಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ನೆಟ್ಟಿಗರು ಪರ ಮತ್ತು ವಿರೋಧದ ಚರ್ಚೆಯಲ್ಲಿ ತೊಡಗಿದ್ದಾರೆ.</p>.<p>ನಿನ್ನೆ ನೆಡೆದ ಪಂದ್ಯದಲ್ಲಿ ಭಾರತ ಹೀನಾಯವಾಗಿ ಸೋಲು ಕಂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>