ಈ ಹಿನ್ನೆಲೆಯಲ್ಲಿ ಕಲಾಪ ಆರಂಭವಾದ ಅರ್ಧ ಗಂಟೆಯಲ್ಲೇ ಅಂದರೆ, 11 ಗಂಟೆಗೆ ಕಲಾಪವನ್ನು ಮುಂದೂಡಲಾಯಿತು. ಊಟದ ವಿರಾಮದ ನಂತರ 2 ಗಂಟೆಗೆ ಕಲಾಪ ಮತ್ತೆ ಆರಂಭವಾಯಿತು. ಆದರೆ, ಕಲಾಪವನ್ನು ಮತ್ತೆ ಮುಂದೂಡಿ ಸರ್ವಪಕ್ಷಗಳ ಸದಸ್ಯರನ್ನು ತಮ್ಮ ಕಚೇರಿಗೆ ಕರೆಸಿಕೊಂಡ ಸ್ಪೀಕರ್ ವಿಜಯ್ ಕುಮಾರ್ ಸಿನ್ಹಾ ಅವರು ಆರ್ಜೆಡಿ ನೇತೃತ್ವದ ಪ್ರತಿಪಕ್ಷಗಳ ಮನವೊಲಿಕೆಗೆ ಯತ್ನಿಸಿದರು. ಆದರೆ, ಅದೂ ಫಲ ಕೊಡಲಿಲ್ಲ. ಹೀಗಾಗಿ ಕಲಾಪವನ್ನು ಮಂಗಳವಾರಕ್ಕೆ ಮುಂದೂಡಿದರು.