<p class="title"><strong>ವಾರಾಣಸಿ:</strong> ಅಗ್ನಿಪಥ ವಿರುದ್ಧದ ಪ್ರತಿಭಟನೆಯ ವೇಳೆ ಸಾರ್ವಜನಿಕ ಆಸ್ತಿಗೆ ಆಗಿರುವ ನಷ್ಟವನ್ನು ಪ್ರತಿಭಟನಕಾರರಿಂದಲೇ ವಸೂಲಿ ಮಾಡಲು ಸ್ಥಳೀಯ ಆಡಳಿತ ನಿರ್ಧರಿಸಿದೆ. ಹಿಂಸಾತ್ಮಕ ಕೃತ್ಯಗಳಲ್ಲಿ ತೊಡಗಿದ್ದವರನ್ನು ಗುರುತಿಸುವ ಪ್ರಕ್ರಿಯೆಯನ್ನು ಆರಂಭಿಸಿದೆ.</p>.<p class="title">ಜಿಲ್ಲಾಧಿಕಾರಿ ಕೌಶಲ್ ರಾಜ್ ಶರ್ಮಾ ಅವರು, ‘ಜೂನ್ 17ರಂದು ನಡೆದಿದ್ದ ಪ್ರತಿಭಟನೆ ವೇಳೆ 36 ಬಸ್ಗಳಿಗೆ ಬೆಂಕಿ ಹಚ್ಚಲಾಗಿತ್ತು. ಒಟ್ಟು ₹ 12.97 ಲಕ್ಷ ನಷ್ಟವಾಗಿದೆ. ಪ್ರತಿಭಟನೆಗೆ ಸಂಬಂಧಿಸಿದಂತೆ ಈವರೆಗೆ 27 ಜನರನ್ನು ಬಂಧಿಸಲಾಗಿದೆ. ಉಳಿದವರನ್ನು ಗುರುತಿಸುವ ಕಾರ್ಯ ನಡೆದಿದೆ’ ಎಂದು ತಿಳಿಸಿದರು.</p>.<p class="title">ಯುವಜನರು ಇಂತಹ ಯಾವುದೇ ಕೃತ್ಯಗಳಲ್ಲಿ ಭಾಗಿಯಾಗಿ ಸಿಕ್ಕಿಬಿದ್ದಲ್ಲಿ, ಭವಿಷ್ಯದಲ್ಲಿ ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಅವಕಾಶ ಕಳೆದುಕೊಳ್ಳಲಿದ್ದಾರೆ. ಅಲ್ಲದೆ, ಆಗಿರುವ ನಷ್ಟವನ್ನು ಅವರೇ ಭರಿಸಬೇಕಾಗುತ್ತದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ವಾರಾಣಸಿ:</strong> ಅಗ್ನಿಪಥ ವಿರುದ್ಧದ ಪ್ರತಿಭಟನೆಯ ವೇಳೆ ಸಾರ್ವಜನಿಕ ಆಸ್ತಿಗೆ ಆಗಿರುವ ನಷ್ಟವನ್ನು ಪ್ರತಿಭಟನಕಾರರಿಂದಲೇ ವಸೂಲಿ ಮಾಡಲು ಸ್ಥಳೀಯ ಆಡಳಿತ ನಿರ್ಧರಿಸಿದೆ. ಹಿಂಸಾತ್ಮಕ ಕೃತ್ಯಗಳಲ್ಲಿ ತೊಡಗಿದ್ದವರನ್ನು ಗುರುತಿಸುವ ಪ್ರಕ್ರಿಯೆಯನ್ನು ಆರಂಭಿಸಿದೆ.</p>.<p class="title">ಜಿಲ್ಲಾಧಿಕಾರಿ ಕೌಶಲ್ ರಾಜ್ ಶರ್ಮಾ ಅವರು, ‘ಜೂನ್ 17ರಂದು ನಡೆದಿದ್ದ ಪ್ರತಿಭಟನೆ ವೇಳೆ 36 ಬಸ್ಗಳಿಗೆ ಬೆಂಕಿ ಹಚ್ಚಲಾಗಿತ್ತು. ಒಟ್ಟು ₹ 12.97 ಲಕ್ಷ ನಷ್ಟವಾಗಿದೆ. ಪ್ರತಿಭಟನೆಗೆ ಸಂಬಂಧಿಸಿದಂತೆ ಈವರೆಗೆ 27 ಜನರನ್ನು ಬಂಧಿಸಲಾಗಿದೆ. ಉಳಿದವರನ್ನು ಗುರುತಿಸುವ ಕಾರ್ಯ ನಡೆದಿದೆ’ ಎಂದು ತಿಳಿಸಿದರು.</p>.<p class="title">ಯುವಜನರು ಇಂತಹ ಯಾವುದೇ ಕೃತ್ಯಗಳಲ್ಲಿ ಭಾಗಿಯಾಗಿ ಸಿಕ್ಕಿಬಿದ್ದಲ್ಲಿ, ಭವಿಷ್ಯದಲ್ಲಿ ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಅವಕಾಶ ಕಳೆದುಕೊಳ್ಳಲಿದ್ದಾರೆ. ಅಲ್ಲದೆ, ಆಗಿರುವ ನಷ್ಟವನ್ನು ಅವರೇ ಭರಿಸಬೇಕಾಗುತ್ತದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>