ಅಗ್ನಿಪಥ ಯೋಜನೆಯನ್ನು ಖಂಡಿಸಿ ದೇಶದ ಹಲವು ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ನಡೆಯುತ್ತಿದ್ದು, ರೈಲಿನ ಬೋಗಿಗಳಿಗೆ ಬೆಂಕಿ, ಸಾರ್ವಜನಿಕ ಆಸ್ತಿ–ಪಾಸ್ತಿ ಹಾನಿ, ರಸ್ತೆ ತಡೆ ನಡೆಸಲಾಗಿದೆ. ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆ ನಡೆದು ಹಿಂಸಾಚಾರಕ್ಕೂ ಕಾರಣವಾಗಿದೆ. ಈ ನಡುವೆ ಸರ್ಕಾರವು 'ಸುಳ್ಳು ಸುದ್ದಿ' ತಡೆಯುವ ಕಾರ್ಯಾಚರಣೆ ನಡೆಸುತ್ತಿದೆ.