ನವದೆಹಲಿ: ‘ನನ್ನ ಮಾತನ್ನು ಬರೆದಿಟ್ಟುಕೊಳ್ಳಿ. ಈ ಕೃಷಿ ಕಾಯ್ದೆಗಳನ್ನು ರದ್ದುಮಾಡುವ ಸ್ಥಿತಿಗೆ ಸರ್ಕಾರವು ಬಂದೇ ಬರುತ್ತದೆ’ ಎಂದು ರಾಹುಲ್ ಗಾಂಧಿ ಅವರು 2021ರ ಜನವರಿ 14ರಂದು ಹೇಳಿದ್ದ ವಿಡಿಯೊ ಈಗ ವೈರಲ್ ಆಗಿದೆ.
ಕೃಷಿ ಕಾಯ್ದೆಗಳ ವಿರುದ್ಧ ರೈತರ ಪ್ರತಿಭಟನೆ ಆರಂಭವಾದಾಗ ರಾಹುಲ್ ಗಾಂಧಿ ಅವರು ಮಾಧ್ಯಮಗೋಷ್ಠಿಯಲ್ಲಿ ಈ ಮಾತು ಹೇಳಿದ್ದರು. ಮಾಧ್ಯಮ ಗೋಷ್ಠಿಯ ವಿಡಿಯೊವನ್ನು ಅವರು ಟ್ವೀಟ್ ಸಹ ಮಾಡಿದ್ದರು.
ಕೃಷಿ ಕಾಯ್ದೆಗಳನ್ನು ರದ್ದುಪಡಿಸುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರು ಈ ವಿಡಿಯೊ ಟ್ವೀಟ್ ಅನ್ನು ಮತ್ತೆ ಟ್ವೀಟ್ ಮಾಡಿದ್ದಾರೆ. ಸ್ವತಃ ರಾಹುಲ್ ಗಾಂಧಿ ಅವರೂ ಆ ವಿಡಿಯೊವನ್ನು ಮತ್ತೆ ಟ್ವೀಟ್ ಮಾಡಿದ್ದಾರೆ.
ಇದೇ ಅಕ್ಟೋಬರ್ 29ರಂದು ರಾಹುಲ್, ‘ಈಗ ಕೇವಲ ಬ್ಯಾರಿಕೇಡ್ಗಳನ್ನು ತೆಗೆಯಲಾಗಿದೆ. ಈ ಕರಾಳ ಕಾಯ್ದೆಗಳನ್ನು ಶೀಘ್ರವೇ ತೆಗೆದುಹಾಕಲಾಗುತ್ತದೆ’ ಎಂದು ಟ್ವೀಟ್ ಮಾಡಿದ್ದರು. ಆ ಟ್ವೀಟ್ ಅನ್ನು ಸಹ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಮರು ಟ್ವೀಟ್ ಮಾಡಿದ್ದಾರೆ.
देश के अन्नदाता ने सत्याग्रह से अहंकार का सर झुका दिया। अन्याय के खिलाफ़ ये जीत मुबारक हो!