2019 ರ ಲೋಕಸಭೆಯಲ್ಲಿ ಗೆದ್ದ ಬಳಿಕ ಅವರು ಪಕ್ಷದ ಚಟುವಟಿಕೆಯಿಂದಲೂ ದೂರ ಉಳಿದಿದ್ದರು. ಯಡಿಯೂರಪ್ಪ ಅವರ ಜತೆಗೆ ನಿಕಟ ಒಡನಾಟ ಹೊಂದಿದ್ದ ಶೋಭಾ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದ ಬಳಿಕ ಅಂತರ ಕಾಯ್ದುಕೊಂಡಿದ್ದರು. ಅದಕ್ಕೆ, ಯಡಿಯೂರಪ್ಪನವರ ಕುಟುಂಬದವರು ಕಾರಣ ಎಂದೂ ಹೇಳಲಾಗಿತ್ತು. ಅಲ್ಲದೇ, ಕರ್ನಾಟಕದ ಸರ್ಕಾರ ಹಾಗೂ ರಾಜಕಾರಣದಲ್ಲಿ ತಲೆ ಹಾಕದಂತೆ ಪಕ್ಷದ ವರಿಷ್ಠರು ಶೋಭಾ ಅವರಿಗೆ ಸ್ಪಷ್ಟ ಸೂಚನೆಯನ್ನು ನೀಡಿದ್ದರು ಎನ್ನಲಾಗುತ್ತಿದೆ.