<p><strong>ನವದೆಹಲಿ:</strong> ಇತ್ತೀಚೆಗೆ ಲೋಕಸಭೆಯಲ್ಲಿ ಅಂಗೀಕಾರವಾಗಿರುವ ಕೃಷಿ ಮಸೂದೆ ಅನುಷ್ಠಾನದ ನಂತರವೂ ಬೆಂಬಲ ಬೆಲೆ ನೀಡಿ ರೈತರಿಂದ ಕೃಷಿ ಉತ್ಪನ್ನ ಖರೀದಿಸುವುದನ್ನು ಮುಂದುವರಿಸಲಾಗುತ್ತದೆ. ಈ ಮಸೂದೆಗೂ ಬೆಂಬಲ ಬೆಲೆ ಆಧಾರಿತ ಖರೀದಿಗೂ ಸಂಬಂಧವಿಲ್ಲ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಸ್ಪಷ್ಟಪಡಿಸಿದ್ದಾರೆ.</p>.<p>ಲೋಕಸಭೆಯಲ್ಲಿ ಧ್ವನಿಮತದ ಮೂಲಕ ಅಂಗೀಕಾರಗೊಂಡ ರೈತರ ಉತ್ಪನ್ನ ವ್ಯಾಪಾರ ಮತ್ತು ವಾಣಿಜ್ಯ (ಉತ್ತೇಜನ ಮತ್ತು ಸೌಲಭ್ಯ) ಮಸೂದೆ, ಬೆಲೆ ಖಾತರಿ ಮತ್ತು ಕೃಷಿ ಸೇವೆಗಳಿಗೆ ರೈತರ ಒಪ್ಪಿಗೆ (ಸಬಲೀಕರಣ ಮತ್ತು ರಕ್ಷಣೆ) ಎಂಬ ಎರಡು ಮಸೂದೆಗಳನ್ನು ರಾಜ್ಯಸಭೆಯಲ್ಲಿ ಮಂಡಿಸುವ ವೇಳೆ ಅವರು ಈ ಮಾಹಿತಿ ನೀಡಿದ್ದಾರೆ.</p>.<p>ಎನ್ಡಿಎ ಮೈತ್ರಿ ಪಕ್ಷ ಶಿರೋಮಣಿ ಅಕಾಲಿ ದಳ (ಎಸ್ಎಡಿ) ಹಾಗೂ ಪ್ರತಿಪಕ್ಷಗಳಾದ ಕಾಂಗ್ರೆಸ್, ಡಿಎಂಕೆ ಮತ್ತು ರೆವಲೂಷನರಿ ಸೋಷಿಯಲ್ಪಾರ್ಟಿ ಸದಸ್ಯರು ಕೃಷಿ ಮಸೂದೆಗಳಿಗೆ ವಿರೋಧ ವ್ಯಕ್ತಪಡಿಸಿದ್ದರು. ಶಿರೋಮಣಿ ಅಕಾಲಿ ದಳ ಪಕ್ಷದ ಆಹಾರ ಸಂಸ್ಕರಣಾ ಸಚಿವ ಹರ್ಸಿಮ್ರತ್ ಕೌರ್ ಬಾದಲ್ ಕಳೆದ ವಾರ ಸರ್ಕಾರಕ್ಕೆ ರಾಜೀನಾಮೆ ನೀಡಿದ್ದರು.</p>.<p>ಕೆ ಕೆ ರಾಗೇಶ್ (ಸಿಪಿಐ), ಡೆರೆಕ್ ಒ'ಬ್ರಿಯೆನ್ (ಟಿಎಂಸಿ), ತಿರುಚಿ ಶಿವ (ಡಿಎಂಕೆ) ಮತ್ತು ಕೆ ಸಿ ವೇಣುಗೋಪಾಲ್ (ಕಾಂಗ್ರೆಸ್) ಈ ಎರಡು ಮಸೂದೆಗಳಿಗೆ ಅಂಗೀಕಾರ ನೀಡುವ ಮುನ್ನ ಸದನ ಸಮಿತಿಗೆ ಕಳುಹಿಸಬೇಕು ಎಂಬ ನಿರ್ಣಯವನ್ನು ಮಂಡಿಸಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಇತ್ತೀಚೆಗೆ ಲೋಕಸಭೆಯಲ್ಲಿ ಅಂಗೀಕಾರವಾಗಿರುವ ಕೃಷಿ ಮಸೂದೆ ಅನುಷ್ಠಾನದ ನಂತರವೂ ಬೆಂಬಲ ಬೆಲೆ ನೀಡಿ ರೈತರಿಂದ ಕೃಷಿ ಉತ್ಪನ್ನ ಖರೀದಿಸುವುದನ್ನು ಮುಂದುವರಿಸಲಾಗುತ್ತದೆ. ಈ ಮಸೂದೆಗೂ ಬೆಂಬಲ ಬೆಲೆ ಆಧಾರಿತ ಖರೀದಿಗೂ ಸಂಬಂಧವಿಲ್ಲ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಸ್ಪಷ್ಟಪಡಿಸಿದ್ದಾರೆ.</p>.<p>ಲೋಕಸಭೆಯಲ್ಲಿ ಧ್ವನಿಮತದ ಮೂಲಕ ಅಂಗೀಕಾರಗೊಂಡ ರೈತರ ಉತ್ಪನ್ನ ವ್ಯಾಪಾರ ಮತ್ತು ವಾಣಿಜ್ಯ (ಉತ್ತೇಜನ ಮತ್ತು ಸೌಲಭ್ಯ) ಮಸೂದೆ, ಬೆಲೆ ಖಾತರಿ ಮತ್ತು ಕೃಷಿ ಸೇವೆಗಳಿಗೆ ರೈತರ ಒಪ್ಪಿಗೆ (ಸಬಲೀಕರಣ ಮತ್ತು ರಕ್ಷಣೆ) ಎಂಬ ಎರಡು ಮಸೂದೆಗಳನ್ನು ರಾಜ್ಯಸಭೆಯಲ್ಲಿ ಮಂಡಿಸುವ ವೇಳೆ ಅವರು ಈ ಮಾಹಿತಿ ನೀಡಿದ್ದಾರೆ.</p>.<p>ಎನ್ಡಿಎ ಮೈತ್ರಿ ಪಕ್ಷ ಶಿರೋಮಣಿ ಅಕಾಲಿ ದಳ (ಎಸ್ಎಡಿ) ಹಾಗೂ ಪ್ರತಿಪಕ್ಷಗಳಾದ ಕಾಂಗ್ರೆಸ್, ಡಿಎಂಕೆ ಮತ್ತು ರೆವಲೂಷನರಿ ಸೋಷಿಯಲ್ಪಾರ್ಟಿ ಸದಸ್ಯರು ಕೃಷಿ ಮಸೂದೆಗಳಿಗೆ ವಿರೋಧ ವ್ಯಕ್ತಪಡಿಸಿದ್ದರು. ಶಿರೋಮಣಿ ಅಕಾಲಿ ದಳ ಪಕ್ಷದ ಆಹಾರ ಸಂಸ್ಕರಣಾ ಸಚಿವ ಹರ್ಸಿಮ್ರತ್ ಕೌರ್ ಬಾದಲ್ ಕಳೆದ ವಾರ ಸರ್ಕಾರಕ್ಕೆ ರಾಜೀನಾಮೆ ನೀಡಿದ್ದರು.</p>.<p>ಕೆ ಕೆ ರಾಗೇಶ್ (ಸಿಪಿಐ), ಡೆರೆಕ್ ಒ'ಬ್ರಿಯೆನ್ (ಟಿಎಂಸಿ), ತಿರುಚಿ ಶಿವ (ಡಿಎಂಕೆ) ಮತ್ತು ಕೆ ಸಿ ವೇಣುಗೋಪಾಲ್ (ಕಾಂಗ್ರೆಸ್) ಈ ಎರಡು ಮಸೂದೆಗಳಿಗೆ ಅಂಗೀಕಾರ ನೀಡುವ ಮುನ್ನ ಸದನ ಸಮಿತಿಗೆ ಕಳುಹಿಸಬೇಕು ಎಂಬ ನಿರ್ಣಯವನ್ನು ಮಂಡಿಸಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>