<p><strong>ನವದೆಹಲಿ:</strong> ಕೇಂದ್ರ ಕೃಷಿ ಕಾಯ್ದೆಗಳ ವಿರುದ್ಧ ರೈತರ ಪ್ರತಿಭಟನೆಯು ಕೇವಲ ಒಂದು ರಾಜ್ಯಕ್ಕೆ ಮಾತ್ರ ಸೀಮಿತವಾಗಿದ್ದು, ರೈತರನ್ನು ಪ್ರಚೋದಿಸಲಾಗುತ್ತಿದೆ ಎಂದು ರಾಜ್ಯಸಭೆಯಲ್ಲಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ತಿಳಿಸಿದ್ದಾರೆ.</p>.<p>ಕೃಷಿ ಕಾಯ್ದೆಯಲ್ಲಿ ತಿದ್ದುಪಡಿ ಮಾಡಲು ಸರ್ಕಾರ ಸಿದ್ಧ ಎಂದು ಹೇಳಿದೆ. ಇದರರ್ಥ ಕೃಷಿ ಕಾಯ್ದೆಗಳಲ್ಲಿ ಸಮಸ್ಯೆಯಿದೆ ಎಂಬುದಲ್ಲ. ನಿರ್ದಿಷ್ಟ ರಾಜ್ಯದ ರೈತರಿಗೆ ತಪ್ಪಾದ ಮಾಹಿತಿ ನೀಡಲಾಗಿದೆ ಎಂದು ತೋಮರ್ ಆರೋಪಿಸಿದರು.</p>.<p>ಈ ಕಾಯ್ದೆಗಳನ್ನು ಜಾರಿಗೆ ತಂದರೆ ರೈತರ ಭೂಮಿಯನ್ನು ಕಸಿದುಕೊಳ್ಳುತ್ತಾರೆ ಎಂದು ತಪ್ಪಾದ ಮಾಹಿತಿ ನೀಡಲಾಗಿದೆ. ರೈತರ ಭೂಮಿಯನ್ನು ಕಸಿದುಕೊಳ್ಳುವ ಒಂದೇ ಒಂದು ನಿಬಂಧನೆ ಕೃಷಿ ಕಾಯ್ದೆಯಲ್ಲಿದೆಯೇ ? ಹಾಗಿದ್ದರೆ ನನಗೆ ತಿಳಿಸಿ ಎಂದು ಸವಾಲು ಹಾಕಿದರು.</p>.<p>ಇದನ್ನೂ ಓದಿ:<a href="https://www.prajavani.net/india-news/farmers-protest-rakesh-tikait-says-chakka-jam-to-be-pan-india-except-delhi-802539.html" itemprop="url">ಫೆ.6ರಂದು ದೆಹಲಿ ಹೊರತುಪಡಿಸಿ ದೇಶವ್ಯಾಪಿ 'ಚಕ್ಕಾ ಜಾಮ್': ಟಿಕಾಯತ್ </a></p>.<p>ರೈತರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆ ತರುವುದು ನಮ್ಮ ಗುರಿಯಾಗಿದೆ. ಹಣ್ಣುಗಳು ಹಾಗೂ ತರಕಾರಿಗಳನ್ನು ರೈಲ್ವೇ ಮೂಲಕ ಸಾಗಿಸಬಹುದು ಎಂದು ಯಾರಾದರೂ ಭಾವಿಸಿದ್ದಾರೆಯೇ? 100 ಕಿಸಾನ್ ರೈಲುಗಳನ್ನು ಪ್ರಾರಂಭಿಸಲಾಗಿದೆ. ಇದು ರೈತರ ಉತ್ಪನ್ನಗಳಿಗೆ ನ್ಯಾಯಯುತ ಬೆಲೆ ಸಿಗಲು ಸಹಾಯ ಮಾಡುತ್ತದೆ ಎಂದು ತಿಳಿಸಿದರು.</p>.<p>ರೈತರ ಕಲ್ಯಾಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಬದ್ಧವಾಗಿದ್ದಾರೆ. ನಮ್ಮ ಪ್ರಯತ್ನಗಳು ರೈತರ ಆದಾಯವನ್ನು ದ್ವಿಗುಣಗೊಳಿಸುತ್ತದೆ ಮತ್ತು ಜಿಡಿಪಿಗೆ ಕೃಷಿಯ ಕೊಡುಗೆ ವೇಗವಾಗಿ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಕೃಷಿ ಕಾಯ್ದೆಗಳು ಒಂದು ಪ್ರಮುಖ ಹೆಜ್ಜೆಯಾಗಿದೆ ಎಂಬುದನ್ನು ರೈತರಿಗೆ ಹೇಳಲು ಬಯಸುತ್ತೇನೆ ಎಂದು ಹೇಳಿದರು.</p>.<p>ನಾವು ಉತ್ಪಾದನಾ ವೆಚ್ಚಕ್ಕಿಂತ ಶೇಕಡಾ 50ಕ್ಕಿಂತಲೂ ಹೆಚ್ಚು ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ನೀಡಲು ಪ್ರಾರಂಭಿಸಿದ್ದೇವೆ. ಅಷ್ಟೇ ಅಲ್ಲದೆ ಆತ್ಮನಿರ್ಭರ್ ಪ್ಯಾಕೇಜ್ ಅಡಿಯಲ್ಲಿ 1 ಲಕ್ಷ ಕೋಟಿ ರೂ. ಕೃಷಿ ಮೂಲಸೌಕರ್ಯ ನಿಧಿ ನೀಡಿದ್ದೇವೆ. ಈ ಹೂಡಿಕೆಯನ್ನು ಕೃಷಿ ಕ್ಷೇತ್ರಕ್ಕೆ ತಲುಪಿಸುವುದನ್ನು ಖಚಿತಪಡಿಸಿದ್ದೇವೆ ಎಂದು ವಿವರಿಸಿದರು.</p>.<p>ಬಡವರ ಪರವಾದ ಸರ್ಕಾರದ ಯೋಜನೆಗಳು ಗ್ರಾಮಗಳಲ್ಲಿ ವಾಸಿಸುವ ಜನರ ಜೀವನದಲ್ಲಿ ಬದಲಾವಣೆಯನ್ನು ತಂದಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೇಂದ್ರ ಕೃಷಿ ಕಾಯ್ದೆಗಳ ವಿರುದ್ಧ ರೈತರ ಪ್ರತಿಭಟನೆಯು ಕೇವಲ ಒಂದು ರಾಜ್ಯಕ್ಕೆ ಮಾತ್ರ ಸೀಮಿತವಾಗಿದ್ದು, ರೈತರನ್ನು ಪ್ರಚೋದಿಸಲಾಗುತ್ತಿದೆ ಎಂದು ರಾಜ್ಯಸಭೆಯಲ್ಲಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ತಿಳಿಸಿದ್ದಾರೆ.</p>.<p>ಕೃಷಿ ಕಾಯ್ದೆಯಲ್ಲಿ ತಿದ್ದುಪಡಿ ಮಾಡಲು ಸರ್ಕಾರ ಸಿದ್ಧ ಎಂದು ಹೇಳಿದೆ. ಇದರರ್ಥ ಕೃಷಿ ಕಾಯ್ದೆಗಳಲ್ಲಿ ಸಮಸ್ಯೆಯಿದೆ ಎಂಬುದಲ್ಲ. ನಿರ್ದಿಷ್ಟ ರಾಜ್ಯದ ರೈತರಿಗೆ ತಪ್ಪಾದ ಮಾಹಿತಿ ನೀಡಲಾಗಿದೆ ಎಂದು ತೋಮರ್ ಆರೋಪಿಸಿದರು.</p>.<p>ಈ ಕಾಯ್ದೆಗಳನ್ನು ಜಾರಿಗೆ ತಂದರೆ ರೈತರ ಭೂಮಿಯನ್ನು ಕಸಿದುಕೊಳ್ಳುತ್ತಾರೆ ಎಂದು ತಪ್ಪಾದ ಮಾಹಿತಿ ನೀಡಲಾಗಿದೆ. ರೈತರ ಭೂಮಿಯನ್ನು ಕಸಿದುಕೊಳ್ಳುವ ಒಂದೇ ಒಂದು ನಿಬಂಧನೆ ಕೃಷಿ ಕಾಯ್ದೆಯಲ್ಲಿದೆಯೇ ? ಹಾಗಿದ್ದರೆ ನನಗೆ ತಿಳಿಸಿ ಎಂದು ಸವಾಲು ಹಾಕಿದರು.</p>.<p>ಇದನ್ನೂ ಓದಿ:<a href="https://www.prajavani.net/india-news/farmers-protest-rakesh-tikait-says-chakka-jam-to-be-pan-india-except-delhi-802539.html" itemprop="url">ಫೆ.6ರಂದು ದೆಹಲಿ ಹೊರತುಪಡಿಸಿ ದೇಶವ್ಯಾಪಿ 'ಚಕ್ಕಾ ಜಾಮ್': ಟಿಕಾಯತ್ </a></p>.<p>ರೈತರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆ ತರುವುದು ನಮ್ಮ ಗುರಿಯಾಗಿದೆ. ಹಣ್ಣುಗಳು ಹಾಗೂ ತರಕಾರಿಗಳನ್ನು ರೈಲ್ವೇ ಮೂಲಕ ಸಾಗಿಸಬಹುದು ಎಂದು ಯಾರಾದರೂ ಭಾವಿಸಿದ್ದಾರೆಯೇ? 100 ಕಿಸಾನ್ ರೈಲುಗಳನ್ನು ಪ್ರಾರಂಭಿಸಲಾಗಿದೆ. ಇದು ರೈತರ ಉತ್ಪನ್ನಗಳಿಗೆ ನ್ಯಾಯಯುತ ಬೆಲೆ ಸಿಗಲು ಸಹಾಯ ಮಾಡುತ್ತದೆ ಎಂದು ತಿಳಿಸಿದರು.</p>.<p>ರೈತರ ಕಲ್ಯಾಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಬದ್ಧವಾಗಿದ್ದಾರೆ. ನಮ್ಮ ಪ್ರಯತ್ನಗಳು ರೈತರ ಆದಾಯವನ್ನು ದ್ವಿಗುಣಗೊಳಿಸುತ್ತದೆ ಮತ್ತು ಜಿಡಿಪಿಗೆ ಕೃಷಿಯ ಕೊಡುಗೆ ವೇಗವಾಗಿ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಕೃಷಿ ಕಾಯ್ದೆಗಳು ಒಂದು ಪ್ರಮುಖ ಹೆಜ್ಜೆಯಾಗಿದೆ ಎಂಬುದನ್ನು ರೈತರಿಗೆ ಹೇಳಲು ಬಯಸುತ್ತೇನೆ ಎಂದು ಹೇಳಿದರು.</p>.<p>ನಾವು ಉತ್ಪಾದನಾ ವೆಚ್ಚಕ್ಕಿಂತ ಶೇಕಡಾ 50ಕ್ಕಿಂತಲೂ ಹೆಚ್ಚು ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ನೀಡಲು ಪ್ರಾರಂಭಿಸಿದ್ದೇವೆ. ಅಷ್ಟೇ ಅಲ್ಲದೆ ಆತ್ಮನಿರ್ಭರ್ ಪ್ಯಾಕೇಜ್ ಅಡಿಯಲ್ಲಿ 1 ಲಕ್ಷ ಕೋಟಿ ರೂ. ಕೃಷಿ ಮೂಲಸೌಕರ್ಯ ನಿಧಿ ನೀಡಿದ್ದೇವೆ. ಈ ಹೂಡಿಕೆಯನ್ನು ಕೃಷಿ ಕ್ಷೇತ್ರಕ್ಕೆ ತಲುಪಿಸುವುದನ್ನು ಖಚಿತಪಡಿಸಿದ್ದೇವೆ ಎಂದು ವಿವರಿಸಿದರು.</p>.<p>ಬಡವರ ಪರವಾದ ಸರ್ಕಾರದ ಯೋಜನೆಗಳು ಗ್ರಾಮಗಳಲ್ಲಿ ವಾಸಿಸುವ ಜನರ ಜೀವನದಲ್ಲಿ ಬದಲಾವಣೆಯನ್ನು ತಂದಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>