'ವಿರೋಧ ಪಕ್ಷಗಳಲ್ಲಿ ಕುಳಿತಿರುವವರು ಹಾಗೂ ಇಂದು ರೈತರ ಹಾದಿ ತಪ್ಪಿಸುತ್ತಿರುವವರು, ಅವರ ಆಡಳಿತಾವಧಿಯಲ್ಲಿ ಈ ಕೃಷಿ ಕಾಯ್ದೆ ತಿದ್ದುಪಡಿಗಳ ಕಡೆಗೆ ಒಲವು ತೋರಿದ್ದರು. ಆಗಿನ ಸರ್ಕಾರ ಕಾಯ್ದೆ ತಿದ್ದುಪಡಿಗೆ ಸಂಬಂಧಿಸಿದಂತೆ ನಿರ್ಧಾರ ಕೈಗೊಳ್ಳಲು ಸಾಧ್ಯವಾಗಲಿಲ್ಲ. ಈಗ ದೇಶವು ಐತಿಹಾಸಿಕ ಹೆಜ್ಜೆ ಇಟ್ಟಿರುವ ಸಮಯದಲ್ಲಿ ಅದೇ ಜನರು ರೈತರ ಹಾದಿ ತಪ್ಪಿಸುತ್ತಿದ್ದಾರೆ' ಎಂದು ಮೋದಿ ಆರೋಪಿಸಿದ್ದಾರೆ.