ದೆಹಲಿ ಮುಖ್ಯಮಂತ್ರಿ ಹಾಗೂ ಎಎಪಿ ಸಂಚಾಲಕ ಅರವಿಂದ ಕೇಜ್ರಿವಾಲ್ ಹಾಗೂ ಪಂಜಾಬ್ ನೂತನ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಗುಜರಾತ್ನಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಈ ಇಬ್ಬರೂ ನಾಯಕರು ಸಾವಿರಾರು ಕಾರ್ಯಕರ್ತರ ಜೊತೆ ಅಹಮದಾಬಾದ್ನಲ್ಲಿಏಪ್ರಿಲ್ 2ರಂದು ಬೃಹತ್ ಪಾದಯಾತ್ರೆ ನಡೆಸಲಿದ್ದಾರೆ. ಮಧ್ಯಮವರ್ಗ ಹಾಗೂ ಬಡವರು ಹೆಚ್ಚಾಗಿ ವಾಸಿಸುತ್ತಿರುವ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.