ತಿರುವನಂತಪುರ: ‘ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಮಾಂಸದ ಬೆಲೆಗಳು ಗಗನಕ್ಕೇರಿವೆ ಎಂಬ ದೂರುಗಳ ಹಿನ್ನೆಲೆಯಲ್ಲಿ ನಾಗರಿಕ ಸರಬರಾಜು ಮತ್ತು ಕಾನೂನು ಮಾಪನ ಇಲಾಖೆ ಅಧಿಕಾರಿಗಳುಕೇರಳದ ಒಟ್ಟು 958 ಮಾಂಸದ ಅಂಗಡಿಗಳನ್ನು ಪರಿಶೀಲನೆ ನಡೆಸಿದ್ದಾರೆ’ ಎಂದು ಕೇರಳ ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಜಿ.ಆರ್ ಅನಿಲ್ ತಿಳಿಸಿದ್ದಾರೆ.