<p><strong>ನವದೆಹಲಿ:</strong>ಅಂತಿಮ ಹಂತದ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಹಾರದ ಅಭಿವೃದ್ಧಿಗೆ ಎನ್ಡಿಎ ನೀಡಿರುವ ಕೊಡುಗೆಗಳ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಸರಣಿ ಟ್ವೀಟ್ ಮಾಡಿದ್ದಾರೆ.</p>.<p>ಈಗಾಗಲೇ ಬಿಹಾರದಲ್ಲಿ ಎರಡು ಹಂತಗಳ ಮತದಾನ ಶಾಂತಿಯುತವಾಗಿ ನಡೆದಿದ್ದು ಅಂತಿಮ ಹಂತದ ಮತದಾನ ಶನಿವಾರ ನಡೆಯಲಿದೆ. ನವೆಂಬರ್ 10ರಂದು ಫಲಿತಾಂಶ ಹೊರ ಬರಲಿದೆ.</p>.<p>ಕೃಷಿ ಯೋಜನೆಗಳು, ಮೂಲಸೌಕರ್ಯ, ಸಮಾಜ ಕಲ್ಯಾಣ ಸೇರಿದಂತೆ ಬಿಹಾರದ ಅಭಿವೃದ್ಧಿಗೆ ಎನ್ಡಿಎ ಸರ್ಕಾರ ಸಾಕಷ್ಟು ಕೊಡುಗೆಗಳನ್ನು ನೀಡಿದೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ತಮ್ಮ ಟ್ವೀಟ್ನಲ್ಲಿ ಅಭಿವೃದ್ಧಿ ಕಾರ್ಯಗಳ ಪಟ್ಟಿ ಮಾಡಿದ್ದಾರೆ.</p>.<p>ಬಿಹಾರ ಯಾವಾಗಲೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿದ ರಾಜ್ಯವಾಗಿದೆ. ಆಗಾಗಿಯೇ ಬಿಹಾರದ ಜನರು ಉತ್ತಮ ಆಡಳಿತಕ್ಕೆ ಆದ್ಯತೆ ನೀಡುತ್ತಾರೆ ಎಂದು ಅವರು ಟ್ವೀಟ್ನಲ್ಲಿ ತಿಳಿಸಿದ್ದಾರೆ.</p>.<p>ಬಿಹಾರಕ್ಕೆ ಸಾಕಷ್ಟು ಬಂಡವಾಳ ಹೂಡಿಕೆ ಹರಿದು ಬರುವಂತಹ ಯೋಜನೆಗಳನ್ನು ರೂಪಿಸಲಾಗುವುದು. ಇದರಿಂದ ಯುವಕರಿಗೆ ಉದ್ಯೋಗಾವಕಾಶಗಳು ಲಭ್ಯವಾಗಲಿವೆ. ಮುದ್ರಾ ಯೋಜನೆ, ಸ್ಟ್ಯಾಂಡ್ ಅಪ್ ಯೋಜನೆ ಅಡಿ ಬಿಹಾರಕ್ಕೆ ಒಂದು ಲಕ್ಷ ಕೋಟಿ ರೂಪಾಯಿಗಳನ್ನು ನೀಡಲಾಗುತ್ತಿದೆ ಎಂದು ಮೋದಿ ಹೇಳಿದ್ದಾರೆ.</p>.<p>ಎನ್ಡಿಎ ಸರ್ಕಾರದಿಂದ ಮಾತ್ರ ಯುವಕರಿಗೆ ಉದ್ಯೋಗ, ರೈತರಿಗೆ ಅನುಕೂಲವಾಗಲಿದೆ ಎಂದು ಮೋದಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong>ಅಂತಿಮ ಹಂತದ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಹಾರದ ಅಭಿವೃದ್ಧಿಗೆ ಎನ್ಡಿಎ ನೀಡಿರುವ ಕೊಡುಗೆಗಳ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಸರಣಿ ಟ್ವೀಟ್ ಮಾಡಿದ್ದಾರೆ.</p>.<p>ಈಗಾಗಲೇ ಬಿಹಾರದಲ್ಲಿ ಎರಡು ಹಂತಗಳ ಮತದಾನ ಶಾಂತಿಯುತವಾಗಿ ನಡೆದಿದ್ದು ಅಂತಿಮ ಹಂತದ ಮತದಾನ ಶನಿವಾರ ನಡೆಯಲಿದೆ. ನವೆಂಬರ್ 10ರಂದು ಫಲಿತಾಂಶ ಹೊರ ಬರಲಿದೆ.</p>.<p>ಕೃಷಿ ಯೋಜನೆಗಳು, ಮೂಲಸೌಕರ್ಯ, ಸಮಾಜ ಕಲ್ಯಾಣ ಸೇರಿದಂತೆ ಬಿಹಾರದ ಅಭಿವೃದ್ಧಿಗೆ ಎನ್ಡಿಎ ಸರ್ಕಾರ ಸಾಕಷ್ಟು ಕೊಡುಗೆಗಳನ್ನು ನೀಡಿದೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ತಮ್ಮ ಟ್ವೀಟ್ನಲ್ಲಿ ಅಭಿವೃದ್ಧಿ ಕಾರ್ಯಗಳ ಪಟ್ಟಿ ಮಾಡಿದ್ದಾರೆ.</p>.<p>ಬಿಹಾರ ಯಾವಾಗಲೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿದ ರಾಜ್ಯವಾಗಿದೆ. ಆಗಾಗಿಯೇ ಬಿಹಾರದ ಜನರು ಉತ್ತಮ ಆಡಳಿತಕ್ಕೆ ಆದ್ಯತೆ ನೀಡುತ್ತಾರೆ ಎಂದು ಅವರು ಟ್ವೀಟ್ನಲ್ಲಿ ತಿಳಿಸಿದ್ದಾರೆ.</p>.<p>ಬಿಹಾರಕ್ಕೆ ಸಾಕಷ್ಟು ಬಂಡವಾಳ ಹೂಡಿಕೆ ಹರಿದು ಬರುವಂತಹ ಯೋಜನೆಗಳನ್ನು ರೂಪಿಸಲಾಗುವುದು. ಇದರಿಂದ ಯುವಕರಿಗೆ ಉದ್ಯೋಗಾವಕಾಶಗಳು ಲಭ್ಯವಾಗಲಿವೆ. ಮುದ್ರಾ ಯೋಜನೆ, ಸ್ಟ್ಯಾಂಡ್ ಅಪ್ ಯೋಜನೆ ಅಡಿ ಬಿಹಾರಕ್ಕೆ ಒಂದು ಲಕ್ಷ ಕೋಟಿ ರೂಪಾಯಿಗಳನ್ನು ನೀಡಲಾಗುತ್ತಿದೆ ಎಂದು ಮೋದಿ ಹೇಳಿದ್ದಾರೆ.</p>.<p>ಎನ್ಡಿಎ ಸರ್ಕಾರದಿಂದ ಮಾತ್ರ ಯುವಕರಿಗೆ ಉದ್ಯೋಗ, ರೈತರಿಗೆ ಅನುಕೂಲವಾಗಲಿದೆ ಎಂದು ಮೋದಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>