<p><strong>ನವದೆಹಲಿ:</strong> ಸರ್ಕಾರದ ಜತೆ ಆರನೇ ಸುತ್ತಿನ ಮಾತುಕತೆ ಹಿನ್ನೆಲೆಯಲ್ಲಿ ರೈತ ನಾಯಕರು ಇಂದು (ಮಂಗಳವಾರ) ಸಂಜೆ 7 ಗಂಟೆಗೆ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಲಿದ್ದಾರೆ.</p>.<p>ಸರ್ಕಾರ ಮತ್ತು ರೈತ ಸಂಘಟನೆಗಳ ನಾಯಕರ ಜತೆಗಿನ ಆರನೇ ಸುತ್ತಿನ ಮಾತುಕತೆ ಬುಧವಾರ ನಿಗದಿಯಾಗಿದೆ.</p>.<p>‘ಅಮಿತ್ ಶಾ ಅವರ ಜತೆ ಇಂದು ಸಂಜೆ 7 ಗಂಟೆಗೆ ಮಾತುಕತೆ ನಡೆಸಲಿದ್ದೇವೆ. ಈಗ ಸಿಂಘು ಗಡಿಗೆ ತೆರಳಲಿದ್ದೇವೆ. ಅಲ್ಲಿಂದ ಗೃಹ ಸಚಿವರ ಬಳಿ ತೆರಳಲಿದ್ದೇವೆ’ ಎಂದು ಭಾರತೀಯ ಕಿಸಾನ್ ಸಂಘದ ವಕ್ತಾರ ರಾಕೇಶ್ ತಿಕಾಯತ್ ತಿಳಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/an-explainer-on-farm-bills-and-why-farmers-protesting-to-withdraw-bills-785417.html" itemprop="url">ರೈತರ ಪ್ರತಿಭಟನೆಗೆ ಕಾರಣವಾದ ಕೃಷಿ ಕಾಯ್ದೆಯ ಅಂಶಗಳ್ಯಾವುವು ?</a></p>.<p>ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ನವೆಂಬರ್ 26ರಿಂದ ದೆಹಲಿ ಗಡಿ ಪ್ರದೇಶಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ರೈತ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ಗೆ ಪ್ರತಿಪಕ್ಷಗಳಿಂದಲೂ ಬೆಂಬಲ ವ್ಯಕ್ತವಾಗಿದೆ.</p>.<p>ರೈತ ನಾಯಕರು ಮತ್ತು ಕೇಂದ್ರ ಸಚಿವರ ಮಧ್ಯೆ ನಡೆದ ಐದನೇ ಸುತ್ತಿನ ಮಾತುಕತೆಯೂ ವಿಫಲಗೊಂಡಿತ್ತು. ಹೀಗಾಗಿ ಬುಧವಾರ ಆರನೇ ಸುತ್ತಿನ ಮಾತುಕತೆ ನಿಗದಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಸರ್ಕಾರದ ಜತೆ ಆರನೇ ಸುತ್ತಿನ ಮಾತುಕತೆ ಹಿನ್ನೆಲೆಯಲ್ಲಿ ರೈತ ನಾಯಕರು ಇಂದು (ಮಂಗಳವಾರ) ಸಂಜೆ 7 ಗಂಟೆಗೆ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಲಿದ್ದಾರೆ.</p>.<p>ಸರ್ಕಾರ ಮತ್ತು ರೈತ ಸಂಘಟನೆಗಳ ನಾಯಕರ ಜತೆಗಿನ ಆರನೇ ಸುತ್ತಿನ ಮಾತುಕತೆ ಬುಧವಾರ ನಿಗದಿಯಾಗಿದೆ.</p>.<p>‘ಅಮಿತ್ ಶಾ ಅವರ ಜತೆ ಇಂದು ಸಂಜೆ 7 ಗಂಟೆಗೆ ಮಾತುಕತೆ ನಡೆಸಲಿದ್ದೇವೆ. ಈಗ ಸಿಂಘು ಗಡಿಗೆ ತೆರಳಲಿದ್ದೇವೆ. ಅಲ್ಲಿಂದ ಗೃಹ ಸಚಿವರ ಬಳಿ ತೆರಳಲಿದ್ದೇವೆ’ ಎಂದು ಭಾರತೀಯ ಕಿಸಾನ್ ಸಂಘದ ವಕ್ತಾರ ರಾಕೇಶ್ ತಿಕಾಯತ್ ತಿಳಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/an-explainer-on-farm-bills-and-why-farmers-protesting-to-withdraw-bills-785417.html" itemprop="url">ರೈತರ ಪ್ರತಿಭಟನೆಗೆ ಕಾರಣವಾದ ಕೃಷಿ ಕಾಯ್ದೆಯ ಅಂಶಗಳ್ಯಾವುವು ?</a></p>.<p>ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ನವೆಂಬರ್ 26ರಿಂದ ದೆಹಲಿ ಗಡಿ ಪ್ರದೇಶಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ರೈತ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ಗೆ ಪ್ರತಿಪಕ್ಷಗಳಿಂದಲೂ ಬೆಂಬಲ ವ್ಯಕ್ತವಾಗಿದೆ.</p>.<p>ರೈತ ನಾಯಕರು ಮತ್ತು ಕೇಂದ್ರ ಸಚಿವರ ಮಧ್ಯೆ ನಡೆದ ಐದನೇ ಸುತ್ತಿನ ಮಾತುಕತೆಯೂ ವಿಫಲಗೊಂಡಿತ್ತು. ಹೀಗಾಗಿ ಬುಧವಾರ ಆರನೇ ಸುತ್ತಿನ ಮಾತುಕತೆ ನಿಗದಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>