ಅಹಮದಾಬಾದ್: ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಎಂಟು ಕೋವಿಡ್-19 ರೋಗಿಗಳು ಮೃತಪಟ್ಟಿದ್ದಾರೆ ಎಂದು ಅಗ್ನಿಶಾಮಕ ದಳದ ಅಧಿಕಾರಿ ಗುರುವಾರ ತಿಳಿಸಿದ್ದಾರೆ.
ಮೃತರಲ್ಲಿ ಐವರು ಪುರುಷರು ಮತ್ತು ಮೂವರು ಮಹಿಳೆಯರು ಇದ್ದಾರೆ. ಅವರು ಅಹಮದಾಬಾದ್ನ ನವರಂಗಪುರ ಪ್ರದೇಶದ ನಿಗದಿಪಡಿಸಿದ ಕೋವಿಡ್-19 ಶ್ರೇಯ್ ಆಸ್ಪತ್ರೆಯ ಐಸಿಯು ವಾರ್ಡ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ.
ಗುರುವಾರ ಮುಂಜಾನೆ 3.30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಸುಮಾರು 40 ಕೋವಿಡ್-19 ರೋಗಿಗಳನ್ನು ರಕ್ಷಿಸಲಾಗಿದ್ದು, ಅವರನ್ನು ನಗರದ ನಾಗರಿಕ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಅವರು ಹೇಳಿದರು.
CM Vijay Rupani has ordered a probe in the incident of fire at Shrey Hospital in Ahmedabad. Sangeeta Singh, Additional Chief Secretary (Home Department) will be leading the probe. The CM has ordered for a report within 3 days: Gujarat Chief Minister's Office (CMO) (file pic) pic.twitter.com/RLOfthZ4yR
— ANI (@ANI) August 6, 2020
ಶ್ರೇಯ್ ಆಸ್ಪತ್ರೆಯ ಐಸಿಯು ವಾರ್ಡ್ನಲ್ಲಿ ದಾಖಲಾದ ಎಂಟು ಕೊರೊನಾ ವೈರಸ್ ರೋಗಿಗಳು ಬೆಂಕಿ ಅವಘಡದಲ್ಲಿ ಮೃತಪಟ್ಟಿದ್ದಾರೆ. ಐಸಿಯು ಸಂಪೂರ್ಣ ಸುಟ್ಟುಹೋಗಿದೆ. ಬೆಂಕಿ ಹೊತ್ತಿಕೊಳ್ಳಲು ಕಾರಣ ತಿಳಿದುಬಂದಿಲ್ಲ ಎಂದು ಅಹಮದಾಬಾದ್ ಅಗ್ನಿಶಾಮಕ ವಿಭಾಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
1,073 ಹೊಸ ಕೊರೊನಾ ವೈರಸ್ ಪ್ರಕರಣಗಳೊಂದಿಗೆ, ಗುಜರಾತ್ನಲ್ಲಿ ಒಟ್ಟಾರೆ ಕೋವಿಡ್-19 ಪ್ರಕರಣಗಳ ಸಂಖ್ಯೆಯು ಬುಧವಾರ 66,777ಕ್ಕೆ ಏರಿಕೆಯಾಗಿದೆ. ಈವರೆಗೂ 2,557 ಜನರು ಕೋವಿಡ್ನಿಂದ ಮೃತಪಟ್ಟಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Saddened by the tragic hospital fire in Ahmedabad. Condolences to the bereaved families. May the injured recover soon. Spoke to CM @vijayrupanibjp Ji and Mayor @ibijalpatel Ji regarding the situation. Administration is providing all possible assistance to the affected.
— Narendra Modi (@narendramodi) August 6, 2020
ಇನ್ನು ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಅಹಮದಾಬಾದ್ನ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಿಂದ ಬೇಸರವಾಗಿದೆ. ಗಾಯಗೊಂಡವರು ಶೀಘ್ರದಲ್ಲೇ ಗುಣಮುಖರಾಗಲಿ ಎಂದು ದುಃಖಿತ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಮುಖ್ಯಮಂತ್ರಿಯೊಂದಿಗೆ ಮಾತನಾಡಲಾಗಿದೆ ಎಂದು ಹೇಳಿದ್ದಾರೆ.
Ex-gratia of Rs. 2 lakh each from PMNRF would be given to the next of kin of those who have lost their lives due to the hospital fire in Ahmedabad. Rs. 50,000 each would be given to those injured due to the hospital fire.
— PMO India (@PMOIndia) August 6, 2020
ಅಲ್ಲದೆ ಬೆಂಕಿ ಅವಘಡದಲ್ಲಿ ಪ್ರಾಣ ಕಳೆದುಕೊಂಡ ಕುಟುಂಬದವರಿಗೆ ಪ್ರಧಾನಮಂತ್ರಿ ಪರಿಹಾರ ನಿಧಿಯಿಂದ ತಲಾ ₹ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ ₹ 50,000 ಪರಿಹಾರ ನೀಡುವುದಾಗಿ ಘೋಷಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.