ಐಸಿಯು ವಾರ್ಡ್ನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ. ಅಲ್ಲಿ ಯಾವುದೇ ಫೈರ್ ಅಲಾರಾಂ ಕೂಡ ಇರಲಿಲ್ಲ. ವಾರ್ಡ್ನಲ್ಲಿದ್ದ ಕಿಟಕಿಗಳಿಗೆ ಮೊಳೆ ಹೊಡೆಯಲಾಗಿತ್ತು. ಆದ್ದರಿಂದ ಕೋವಿಡ್ ರೋಗಿಗಳು ಬೆಂಕಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ. ಆಸ್ಪತ್ರೆಯ ಆಡಳಿತಾಧಿಕಾರಿ ವಿರುದ್ಧ ನಿರ್ಲಕ್ಷ್ಯಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದೆ ಎಂದು ಸಹಾಯಕ ಪೊಲೀಸ್ ಆಯುಕ್ತ ಎಂ.ಎ. ಪಟೇಲ್ ತಿಳಿಸಿದ್ದಾರೆ.