<p><strong>ಚೆನ್ನೈ: </strong>ತಮಿಳುನಾಡು ಮಾಜಿ ಮುಖ್ಯಮಂತ್ರಿ ಒ. ಪನ್ನೀರ್ಸೆಲ್ವಂ ಅವರ ಪತ್ನಿ ವಿಜಯಲಕ್ಷ್ಮಿ ಅವರು (66) ಹೃದಯಾಘಾತದಿಂದಾಗಿ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನರಾದರು.</p>.<p>‘ವಿಜಯಲಕ್ಷ್ಮಿ ಅವರಿಗೆ ಮುಂಜಾನೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಚಿಕಿತ್ಸೆಗೆ ಸ್ಪಂದಿಸದೇ ಅವರು ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದರು’ ಎಂದು ಜಿಇಎಂ ಆಸ್ಪತ್ರೆ ಹೇಳಿಕೆ ಬಿಡುಗಡೆ ಮಾಡಿದೆ.</p>.<p>‘ಅನಾರೋಗ್ಯದಿಂದ ಬಳಲುತ್ತಿದ್ದ ವಿಜಯಲಕ್ಷ್ಮಿ ಅವರು ಜಿಇಎಂ ಆಸ್ಪತ್ರೆಗೆ ದಾಖಲಾಗಿದ್ದರು. 10 ದಿನಗಳ ಚಿಕಿತ್ಸೆಯ ಬಳಿಕ ಬುಧವಾರ ಅವರು ಆಸ್ಪತ್ರೆಯಿಂದ ಬಿಡುಗಡೆಗೊಳ್ಳಬೇಕಾಗಿತ್ತು. ಆದರೆ ಬೆಳಿಗ್ಗೆ ಅವರಿಗೆ ಹೃದಯಾಘಾತ ಕಾಣಿಸಿಕೊಂಡಿದೆ’ ಎಂದು ಆಸ್ಪತ್ರೆ ತಿಳಿಸಿದೆ.</p>.<p>ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ಜಲಸಂಪನ್ಮೂಲ ಸಚಿವ ದೊರೈಮುರಗನ್, ಎಐಎಡಿಎಂಕೆ ಸಹ ಸಂಯೋಜಕ ಕೆ. ಪಳನಿಸ್ವಾಮಿ ಆಸ್ಪತ್ರೆಗೆ ಭೇಟಿ ನೀಡಿ, ಪನ್ನೀರ್ಸೆಲ್ವಂ ಮತ್ತು ಅವರ ಮಗ ಒ.ಪಿ ರವೀಂದ್ರನಾಥ್ ಅವರಿಗೆ ಸಾಂತ್ವನ ಹೇಳಿದರು.</p>.<p><a href="https://www.prajavani.net/district/mysore/mysuru-gang-rape-accused-tried-to-attack-police-with-knife-attempted-to-murder-862795.html" itemprop="url">ಮೈಸೂರು ಅತ್ಯಾಚಾರ ಪ್ರಕರಣ: ಪೊಲೀಸರನ್ನೇ ಇರಿಯಲು ಮುನ್ನುಗ್ಗಿದ್ದ ಆರೋಪಿ! </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ: </strong>ತಮಿಳುನಾಡು ಮಾಜಿ ಮುಖ್ಯಮಂತ್ರಿ ಒ. ಪನ್ನೀರ್ಸೆಲ್ವಂ ಅವರ ಪತ್ನಿ ವಿಜಯಲಕ್ಷ್ಮಿ ಅವರು (66) ಹೃದಯಾಘಾತದಿಂದಾಗಿ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನರಾದರು.</p>.<p>‘ವಿಜಯಲಕ್ಷ್ಮಿ ಅವರಿಗೆ ಮುಂಜಾನೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಚಿಕಿತ್ಸೆಗೆ ಸ್ಪಂದಿಸದೇ ಅವರು ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದರು’ ಎಂದು ಜಿಇಎಂ ಆಸ್ಪತ್ರೆ ಹೇಳಿಕೆ ಬಿಡುಗಡೆ ಮಾಡಿದೆ.</p>.<p>‘ಅನಾರೋಗ್ಯದಿಂದ ಬಳಲುತ್ತಿದ್ದ ವಿಜಯಲಕ್ಷ್ಮಿ ಅವರು ಜಿಇಎಂ ಆಸ್ಪತ್ರೆಗೆ ದಾಖಲಾಗಿದ್ದರು. 10 ದಿನಗಳ ಚಿಕಿತ್ಸೆಯ ಬಳಿಕ ಬುಧವಾರ ಅವರು ಆಸ್ಪತ್ರೆಯಿಂದ ಬಿಡುಗಡೆಗೊಳ್ಳಬೇಕಾಗಿತ್ತು. ಆದರೆ ಬೆಳಿಗ್ಗೆ ಅವರಿಗೆ ಹೃದಯಾಘಾತ ಕಾಣಿಸಿಕೊಂಡಿದೆ’ ಎಂದು ಆಸ್ಪತ್ರೆ ತಿಳಿಸಿದೆ.</p>.<p>ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ಜಲಸಂಪನ್ಮೂಲ ಸಚಿವ ದೊರೈಮುರಗನ್, ಎಐಎಡಿಎಂಕೆ ಸಹ ಸಂಯೋಜಕ ಕೆ. ಪಳನಿಸ್ವಾಮಿ ಆಸ್ಪತ್ರೆಗೆ ಭೇಟಿ ನೀಡಿ, ಪನ್ನೀರ್ಸೆಲ್ವಂ ಮತ್ತು ಅವರ ಮಗ ಒ.ಪಿ ರವೀಂದ್ರನಾಥ್ ಅವರಿಗೆ ಸಾಂತ್ವನ ಹೇಳಿದರು.</p>.<p><a href="https://www.prajavani.net/district/mysore/mysuru-gang-rape-accused-tried-to-attack-police-with-knife-attempted-to-murder-862795.html" itemprop="url">ಮೈಸೂರು ಅತ್ಯಾಚಾರ ಪ್ರಕರಣ: ಪೊಲೀಸರನ್ನೇ ಇರಿಯಲು ಮುನ್ನುಗ್ಗಿದ್ದ ಆರೋಪಿ! </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>