ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಲಾಲು ಅವರು ಚಿಕಿತ್ಸೆ ಪಡೆಯುತ್ತಿರುವ ಇಲ್ಲಿನ ಆಸ್ಪತ್ರೆಗೆ ಬುಧವಾರ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ‘ಲಾಲುಜಿ ಅವರು ಆಸ್ಪತ್ರಗೆ ದಾಖಲಾದ ನಂತರ ಅವರ ಸ್ಥಿತಿಯಲ್ಲಿ ಸ್ವಲ್ಪ ಸುಧಾರಣೆ ಕಂಡುಬರುತ್ತಿದೆ.ಆದರೆ, ಉತ್ತಮ ಚಿಕಿತ್ಸೆಗಾಗಿ ದೆಹಲಿಗೆ ಕರೆದೊಯ್ಯುವುದು ಒಳ್ಳೆಯದು.ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಲಾಲು ಅವರುನಿಯಮಾನುಸಾರ ವೈದ್ಯಕೀಯ ವೆಚ್ಚಕ್ಕಾಗಿ ರಾಜ್ಯ ಸರ್ಕಾರದಿಂದ ಸಹಾಯ ಪಡೆಯುತ್ತಾರೆ’ ಎಂದು ಹೇಳಿದರು.