‘ಕಾಂಗ್ರೆಸ್ ಅಭ್ಯರ್ಥಿ ಶಾಯರ್ ಇಮ್ರಾನ್ ಅವರಿಗೆ ಮತ ನೀಡುವಂತೆ ನಮ್ಮ ಇಬ್ಬರು ಶಾಸಕರಿಗೆ ಸೂಚಿಸಲಾಗಿದೆ. ಅವರಿಗೆ ನಮ್ಮ ಶುಭಾಶಯಗಳು. ಬಿಜೆಪಿಯನ್ನು ಸೋಲಿಸುವುದಕ್ಕಾಗಿ ನಮ್ಮ ಪಕ್ಷವು ರಾಜ್ಯಸಭೆ ಚುನಾವಣೆಯಲ್ಲಿ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟದ ಅಭ್ಯರ್ಥಿಗೆ ಮತ ನೀಡಲು ನಿರ್ಧರಿಸಿದೆ. ಆದಾಗ್ಯೂ, ಮೈತ್ರಿಕೂಟದ ಸದಸ್ಯ ಪಕ್ಷವಾಗಿರುವ ಶಿವ ಸೇನಾ ಜತೆಗಿನ ನಮ್ಮ ರಾಜಕೀಯ ಭಿನ್ನಾಭಿಪ್ರಾಯಗಳು ಮುಂದುವರಿಯಲಿವೆ’ ಎಂದು ಇಮ್ತಿಯಾಜ್ ಜಲೀಲ್ ಟ್ವೀಟ್ನಲ್ಲಿ ಉಲ್ಲೇಖಿಸಿದ್ದಾರೆ.